<p><strong>ಮೈಸೂರು:</strong> ಮೈಸೂರು–ಕುಶಾಲನಗರ ನಡುವೆ ಸುಮಾರು 89 ಕಿ.ಮೀ ಉದ್ದದ ಉದ್ದೇಶಿತ ರೈಲು ಮಾರ್ಗ ನಿರ್ಮಾಣ ಮಾಡುವ ಯೋಜನೆಯನ್ನು ನೈರುತ್ಯ ರೈಲ್ವೆಯು ಸದ್ಯಕ್ಕೆ ಕೈಬಿಟ್ಟಿದೆ. </p><p>ಈ ಕುರಿತು ನೈರುತ್ಯ ರೈಲ್ವೆ ವಿಭಾಗೀಯ ಅಧಿಕಾರಿಗಳು ಕೇಂದ್ರಕ್ಕೆ ವರದಿ ಸಲ್ಲಿಸಿದ್ದಾರೆ. ‘ಉದ್ದೇಶಿತ ಮಾರ್ಗ ದೀರ್ಘಾವಧಿಯಲ್ಲಿ ಲಾಭದಾಯಕವಾಗಿಲ್ಲ’ ಎನ್ನುವ ಕಾರಣಕ್ಕೆ ಈ ನಿರ್ಧಾರಕ್ಕೆ ಬರಲಾಗಿದೆ.</p><p>ಯೋಜನೆ ಜಾರಿಗೆ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಆಸಕ್ತಿ ತೋರಿದ್ದರು. ₹3,084 ಕೋಟಿ ವೆಚ್ಚದಲ್ಲಿ ಪ್ರಾಥಮಿಕ ಪ್ರಸ್ತಾವ ಸಿದ್ಧಪಡಿಸಿದ್ದು, ಜಮೀನು ಒದಗಿಸುವಂತೆ ರಾಜ್ಯ ಸರ್ಕಾರಕ್ಕೆ ಕೋರಿದ್ದರು. ಆದರೆ, ಈ ಪ್ರಸ್ತಾವ ಕೈಬಿಡುವಂತೆ ಸರ್ಕಾರ ಪತ್ರ ಬರೆದಿತ್ತು.</p><p>ಯೋಜನೆ ಸಂಬಂಧ ಸಮೀಕ್ಷೆ ನಡೆಸಲು 2018–19ನೇ ಸಾಲಿನಲ್ಲಿ ಕೇಂದ್ರ ಸರ್ಕಾರವು ನೈರುತ್ಯ ರೈಲ್ವೆಗೆ ಹಸಿರುನಿಶಾನೆ ತೋರಿತ್ತು. 1,379 ಎಕರೆ ಭೂಸ್ವಾಧೀನ ಪಡೆಯುವ ಅಂದಾಜಿತ್ತು. 2022ರ ಜೂನ್ನಲ್ಲಿ ಸ್ಥಳ ಸಮೀಕ್ಷೆಯ ಅಂತಿಮ ಪ್ರಕ್ರಿಯೆ ಆರಂಭಗೊಂಡಿತ್ತು. ಪರಿಸರ ಪ್ರಿಯರಿಂದ ಸಾಕಷ್ಟು ವಿರೋಧವೂ ವ್ಯಕ್ತವಾಗಿತ್ತು. </p><p><strong>ಕೇಂದ್ರಕ್ಕೆ ಮನವಿ:</strong> ‘ಈ ಯೋಜನೆ ಮೈಸೂರು-ಕೊಡಗು ಜನರ ಬಹುದಿನದ ಕನಸು. ಯೋಜನೆಯ ಪರ-ವಿರೋಧ ಎರಡೂ ಇವೆ. ಎಲ್ಲರ ಅಭಿಪ್ರಾಯ ಪಡೆದು ಮರು ಪರಿಶೀಲಿಸುವಂತೆ ಕೇಂದ್ರಕ್ಕೆ ಮನವಿ ಮಾಡಲಾಗುವುದು’ ಎಂದು ಮೈಸೂರು–ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪ್ರತಿಕ್ರಿಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಮೈಸೂರು–ಕುಶಾಲನಗರ ನಡುವೆ ಸುಮಾರು 89 ಕಿ.ಮೀ ಉದ್ದದ ಉದ್ದೇಶಿತ ರೈಲು ಮಾರ್ಗ ನಿರ್ಮಾಣ ಮಾಡುವ ಯೋಜನೆಯನ್ನು ನೈರುತ್ಯ ರೈಲ್ವೆಯು ಸದ್ಯಕ್ಕೆ ಕೈಬಿಟ್ಟಿದೆ. </p><p>ಈ ಕುರಿತು ನೈರುತ್ಯ ರೈಲ್ವೆ ವಿಭಾಗೀಯ ಅಧಿಕಾರಿಗಳು ಕೇಂದ್ರಕ್ಕೆ ವರದಿ ಸಲ್ಲಿಸಿದ್ದಾರೆ. ‘ಉದ್ದೇಶಿತ ಮಾರ್ಗ ದೀರ್ಘಾವಧಿಯಲ್ಲಿ ಲಾಭದಾಯಕವಾಗಿಲ್ಲ’ ಎನ್ನುವ ಕಾರಣಕ್ಕೆ ಈ ನಿರ್ಧಾರಕ್ಕೆ ಬರಲಾಗಿದೆ.</p><p>ಯೋಜನೆ ಜಾರಿಗೆ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಆಸಕ್ತಿ ತೋರಿದ್ದರು. ₹3,084 ಕೋಟಿ ವೆಚ್ಚದಲ್ಲಿ ಪ್ರಾಥಮಿಕ ಪ್ರಸ್ತಾವ ಸಿದ್ಧಪಡಿಸಿದ್ದು, ಜಮೀನು ಒದಗಿಸುವಂತೆ ರಾಜ್ಯ ಸರ್ಕಾರಕ್ಕೆ ಕೋರಿದ್ದರು. ಆದರೆ, ಈ ಪ್ರಸ್ತಾವ ಕೈಬಿಡುವಂತೆ ಸರ್ಕಾರ ಪತ್ರ ಬರೆದಿತ್ತು.</p><p>ಯೋಜನೆ ಸಂಬಂಧ ಸಮೀಕ್ಷೆ ನಡೆಸಲು 2018–19ನೇ ಸಾಲಿನಲ್ಲಿ ಕೇಂದ್ರ ಸರ್ಕಾರವು ನೈರುತ್ಯ ರೈಲ್ವೆಗೆ ಹಸಿರುನಿಶಾನೆ ತೋರಿತ್ತು. 1,379 ಎಕರೆ ಭೂಸ್ವಾಧೀನ ಪಡೆಯುವ ಅಂದಾಜಿತ್ತು. 2022ರ ಜೂನ್ನಲ್ಲಿ ಸ್ಥಳ ಸಮೀಕ್ಷೆಯ ಅಂತಿಮ ಪ್ರಕ್ರಿಯೆ ಆರಂಭಗೊಂಡಿತ್ತು. ಪರಿಸರ ಪ್ರಿಯರಿಂದ ಸಾಕಷ್ಟು ವಿರೋಧವೂ ವ್ಯಕ್ತವಾಗಿತ್ತು. </p><p><strong>ಕೇಂದ್ರಕ್ಕೆ ಮನವಿ:</strong> ‘ಈ ಯೋಜನೆ ಮೈಸೂರು-ಕೊಡಗು ಜನರ ಬಹುದಿನದ ಕನಸು. ಯೋಜನೆಯ ಪರ-ವಿರೋಧ ಎರಡೂ ಇವೆ. ಎಲ್ಲರ ಅಭಿಪ್ರಾಯ ಪಡೆದು ಮರು ಪರಿಶೀಲಿಸುವಂತೆ ಕೇಂದ್ರಕ್ಕೆ ಮನವಿ ಮಾಡಲಾಗುವುದು’ ಎಂದು ಮೈಸೂರು–ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪ್ರತಿಕ್ರಿಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>