ದಾಖಲೆ ಸಲ್ಲಿಸುವಂತೆ ಸಮನ್ಸ್
ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ಅವರಿಗೆ ಜಾರಿ ನಿರ್ದೇಶನಾಲಯವು ಸಮನ್ಸ್ ನೀಡಿದ್ದು, ‘ದೂರಿಗೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸಿ’ ಎಂದು ಸೂಚಿಸಿದೆ ಎಂದು ಗೊತ್ತಾಗಿದೆ. ‘ಅಕ್ಟೋಬರ್ 3ರ ಬೆಳಿಗ್ಗೆ 11ರ ಹೊತ್ತಿಗೆ ದಾಖಲೆಗಳನ್ನು ಇ–ಮೇಲ್ ಮೂಲಕ ಸಲ್ಲಿಸಿ ಎಂದು ಸೂಚಿಸಲಾಗಿದೆ’ ಎಂದು ಇ.ಡಿ ಮೂಲಗಳು ಹೇಳಿವೆ.