<p>ಮೈಸೂರು: ‘ರಾಜ್ಯದಲ್ಲಿ ಕನ್ನಡ ಭಾಷೆ ಸಂಪೂರ್ಣವಾಗಿ ಕಡೆಗಣಿಸಲಾಗುತ್ತಿದ್ದು, ರಾಜ್ಯಪಾಲರ ಲೋಕಭವನವೇ ಕನ್ನಡ ವಿರೋಧಿಯಾಗಿದೆ’ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ವಿಷಾದ ವ್ಯಕ್ತಪಡಿಸಿದರು.</p>.<p>ಇಲ್ಲಿನ ಹಾರ್ಡಿಂಜ್ ವೃತ್ತದಲ್ಲಿ ಭಾನುವಾರ ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ, ಕನ್ನಡ ಭಾಷೆ ಕಡೆಗಣನೆ ಹಾಗೂ ಸಿದ್ದರಾಮಯ್ಯ ರಾಜೀನಾಮೆ ಖಂಡಿಸಿ ಪ್ರತಿಭಟನೆ ನಡೆಸಿ ಮಾತನಾಡಿದರು.</p>.<p>‘ಕಾಸರಗೋಡು, ಮಡಕಶಿರಾ, ತಾಳವಾಡಿ, ಹೊಸೂರು, ಸೊಲ್ಲಾಪುರ ಮತ್ತು ಅಕ್ಕಲಕೋಟೆ ಮುಂತಾದ ಗಡಿ ಪ್ರದೇಶಗಳಲ್ಲಿನ ಕನ್ನಡ ಶಾಲೆಗಳ ಮೇಲೆ ಹೊರರಾಜ್ಯದವರು ದಾಳಿ ನಡೆಸುತ್ತಿದ್ದಾರೆ. ಗಡಿನಾಡಿನಿಂದ ಬಂದ ಜನರಿಗೆ ಗೌರವ, ಅವಕಾಶಗಳನ್ನು ನೀಡುತ್ತಿಲ್ಲ. ಲೋಕಭವನದಲ್ಲಿನ ವ್ಯವಹಾರಗಳೂ ಇಂಗ್ಲಿಷ್ ಅಥವಾ ಹಿಂದಿ ಭಾಷೆಯಲ್ಲಿರುತ್ತದೆ’ ಎಂದು ದೂರಿದರು.</p>.<p>ತೀವ್ರ ಸಂಕಷ್ಟ: ಇಂಧನ, ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ದೇಶದಲ್ಲೇ ಗಂಭೀರ ಪರಿಸ್ಥಿತಿ ನಿರ್ಮಾಣವಾಗಿದೆ. ಜನರು ತೀವ್ರ ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ಬೆಲೆ ಏರಿಕೆಗೆ ಕಡಿವಾಣ ಹಾಕುವ ಜನಪರ ಆಡಳಿತ ಜಾರಿಯಾಗಬೇಕು ಎಂದು ಆಗ್ರಹಿಸಿದರು.</p>.<p>‘ಸಿದ್ದರಾಮಯ್ಯ ಪ್ರಬುದ್ಧ ರಾಜಕಾರಣಿ. ಅವರು, ರಾಜೀನಾಮೆ ಕೊಡಬಾರದಿತ್ತು. ಈ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಗೌರವವಾಗಿ ನಡೆಸಿಕೊಳ್ಳದೇ ಬಲವಂತಾಗಿ ರಾಜೀನಾಮೆ ಪಡೆದಿದೆ’ ಎಂದರು.</p>.<p>ಕನ್ನಡ ಹೋರಾಟಗಾರ ಮೂಗೂರು ನಂಜುಂಡಸ್ವಾಮಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-51-771944146</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ‘ರಾಜ್ಯದಲ್ಲಿ ಕನ್ನಡ ಭಾಷೆ ಸಂಪೂರ್ಣವಾಗಿ ಕಡೆಗಣಿಸಲಾಗುತ್ತಿದ್ದು, ರಾಜ್ಯಪಾಲರ ಲೋಕಭವನವೇ ಕನ್ನಡ ವಿರೋಧಿಯಾಗಿದೆ’ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ವಿಷಾದ ವ್ಯಕ್ತಪಡಿಸಿದರು.</p>.<p>ಇಲ್ಲಿನ ಹಾರ್ಡಿಂಜ್ ವೃತ್ತದಲ್ಲಿ ಭಾನುವಾರ ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ, ಕನ್ನಡ ಭಾಷೆ ಕಡೆಗಣನೆ ಹಾಗೂ ಸಿದ್ದರಾಮಯ್ಯ ರಾಜೀನಾಮೆ ಖಂಡಿಸಿ ಪ್ರತಿಭಟನೆ ನಡೆಸಿ ಮಾತನಾಡಿದರು.</p>.<p>‘ಕಾಸರಗೋಡು, ಮಡಕಶಿರಾ, ತಾಳವಾಡಿ, ಹೊಸೂರು, ಸೊಲ್ಲಾಪುರ ಮತ್ತು ಅಕ್ಕಲಕೋಟೆ ಮುಂತಾದ ಗಡಿ ಪ್ರದೇಶಗಳಲ್ಲಿನ ಕನ್ನಡ ಶಾಲೆಗಳ ಮೇಲೆ ಹೊರರಾಜ್ಯದವರು ದಾಳಿ ನಡೆಸುತ್ತಿದ್ದಾರೆ. ಗಡಿನಾಡಿನಿಂದ ಬಂದ ಜನರಿಗೆ ಗೌರವ, ಅವಕಾಶಗಳನ್ನು ನೀಡುತ್ತಿಲ್ಲ. ಲೋಕಭವನದಲ್ಲಿನ ವ್ಯವಹಾರಗಳೂ ಇಂಗ್ಲಿಷ್ ಅಥವಾ ಹಿಂದಿ ಭಾಷೆಯಲ್ಲಿರುತ್ತದೆ’ ಎಂದು ದೂರಿದರು.</p>.<p>ತೀವ್ರ ಸಂಕಷ್ಟ: ಇಂಧನ, ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ದೇಶದಲ್ಲೇ ಗಂಭೀರ ಪರಿಸ್ಥಿತಿ ನಿರ್ಮಾಣವಾಗಿದೆ. ಜನರು ತೀವ್ರ ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ಬೆಲೆ ಏರಿಕೆಗೆ ಕಡಿವಾಣ ಹಾಕುವ ಜನಪರ ಆಡಳಿತ ಜಾರಿಯಾಗಬೇಕು ಎಂದು ಆಗ್ರಹಿಸಿದರು.</p>.<p>‘ಸಿದ್ದರಾಮಯ್ಯ ಪ್ರಬುದ್ಧ ರಾಜಕಾರಣಿ. ಅವರು, ರಾಜೀನಾಮೆ ಕೊಡಬಾರದಿತ್ತು. ಈ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಗೌರವವಾಗಿ ನಡೆಸಿಕೊಳ್ಳದೇ ಬಲವಂತಾಗಿ ರಾಜೀನಾಮೆ ಪಡೆದಿದೆ’ ಎಂದರು.</p>.<p>ಕನ್ನಡ ಹೋರಾಟಗಾರ ಮೂಗೂರು ನಂಜುಂಡಸ್ವಾಮಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-51-771944146</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>