<p><strong>ಬೆಂಗಳೂರು</strong>: ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿ (ನ್ಯಾಕ್) ಪರಿಶೀಲನಾ ಸಮಿತಿಯ ಭ್ರಷ್ಟಾಚಾರ ಪ್ರಕರಣದಲ್ಲಿ ರಾಜ್ಯದ ಅಧ್ಯಾಪಕರು ಮತ್ತು ಸಿಬ್ಬಂದಿ ಭಾಗಿಯಾಗಿರುವುದಕ್ಕೆ ಸಾಕ್ಷ್ಯ ನೀಡಿದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ಹೇಳಿದರು.</p>.<p>ಸುದ್ದಿಗಾರರ ಜತೆ ಮಾತನಾಡಿದ ಅವರು, ದಾವಣಗೆರೆ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಗಾಯತ್ರಿ ದೇವರಾಜ, ಬೆಂಗಳೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಐಕ್ಯುಎಸಿ–ನ್ಯಾಕ್ ನಿರ್ದೇಶಕ ಎಂ.ಹನುಮಂತಪ್ಪ ಲಂಚಕ್ಕೆ ಬೇಡಿಕೆ ಇಟ್ಟಿದ್ದ ವಿಷಯ ಕುರಿತು ರಾಜ್ಯ ಸರ್ಕಾರಕ್ಕೆ ಸಿಬಿಐ ಅಧಿಕೃತ ಮಾಹಿತಿ ನೀಡಿಲ್ಲ ಎಂದರು.</p>.<p>ಆಂಧ್ರಪ್ರದೇಶದ ಗುಂಟೂರಿನಲ್ಲಿರುವ ಕೋನೇರು ಲಕ್ಷ್ಮಯ್ಯ ಎಜುಕೇಷನ್ ಫೌಂಡೇಷನ್ (ಕೆಎಲ್ಇಎಫ್) ನ್ಯಾಕ್ನಿಂದ ‘ಎ’ ಪ್ಲಸ್ ಗ್ರೇಡ್ ಪಡೆಯಲು ಲಂಚ ನೀಡಿದ ಆರೋಪ ಕೇಳಿಬಂದಿತ್ತು. ಸಿಬಿಐ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದೆ.</p>.<p>ವಿಶ್ವವಿದ್ಯಾಲಯದಲ್ಲಿನ ಮೂಲಸೌಕರ್ಯಗಳು, ಸಂಶೋಧನೆ, ವೈಜ್ಞಾನಿಕ ಉಪಕರಣಗಳು, ಬೋಧನೆ, ಸಂಶೋಧನೆಗಳಿಗೆ ಪೇಟೆಂಟ್ ಬಂದಿರುವುದು, ಅಂತರರಾಷ್ಟ್ರೀಯ ಮಟ್ಟದಲ್ಲಿ ಸಂಶೋಧನಾ ಪ್ರಬಂಧಗಳ ಮಂಡನೆ, ಕಲಿಕೆ, ಬೋಧನೆ ಮತ್ತು ಸಂಶೋಧನಾ ಚಟುವಟಿಕೆಗಳಿಗೆ ತಂತ್ರಜ್ಞಾನದ ಅಳವಡಿಕೆ ಸೇರಿದಂತೆ ಅಂಶಗಳನ್ನು ಆಧರಿಸಿ ನ್ಯಾಕ್ ಸಮಿತಿಯು ಅಂಕ ಮತ್ತು ಗ್ರೇಡ್ಗಳನ್ನು ನೀಡುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿ (ನ್ಯಾಕ್) ಪರಿಶೀಲನಾ ಸಮಿತಿಯ ಭ್ರಷ್ಟಾಚಾರ ಪ್ರಕರಣದಲ್ಲಿ ರಾಜ್ಯದ ಅಧ್ಯಾಪಕರು ಮತ್ತು ಸಿಬ್ಬಂದಿ ಭಾಗಿಯಾಗಿರುವುದಕ್ಕೆ ಸಾಕ್ಷ್ಯ ನೀಡಿದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ಹೇಳಿದರು.</p>.<p>ಸುದ್ದಿಗಾರರ ಜತೆ ಮಾತನಾಡಿದ ಅವರು, ದಾವಣಗೆರೆ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಗಾಯತ್ರಿ ದೇವರಾಜ, ಬೆಂಗಳೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಐಕ್ಯುಎಸಿ–ನ್ಯಾಕ್ ನಿರ್ದೇಶಕ ಎಂ.ಹನುಮಂತಪ್ಪ ಲಂಚಕ್ಕೆ ಬೇಡಿಕೆ ಇಟ್ಟಿದ್ದ ವಿಷಯ ಕುರಿತು ರಾಜ್ಯ ಸರ್ಕಾರಕ್ಕೆ ಸಿಬಿಐ ಅಧಿಕೃತ ಮಾಹಿತಿ ನೀಡಿಲ್ಲ ಎಂದರು.</p>.<p>ಆಂಧ್ರಪ್ರದೇಶದ ಗುಂಟೂರಿನಲ್ಲಿರುವ ಕೋನೇರು ಲಕ್ಷ್ಮಯ್ಯ ಎಜುಕೇಷನ್ ಫೌಂಡೇಷನ್ (ಕೆಎಲ್ಇಎಫ್) ನ್ಯಾಕ್ನಿಂದ ‘ಎ’ ಪ್ಲಸ್ ಗ್ರೇಡ್ ಪಡೆಯಲು ಲಂಚ ನೀಡಿದ ಆರೋಪ ಕೇಳಿಬಂದಿತ್ತು. ಸಿಬಿಐ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದೆ.</p>.<p>ವಿಶ್ವವಿದ್ಯಾಲಯದಲ್ಲಿನ ಮೂಲಸೌಕರ್ಯಗಳು, ಸಂಶೋಧನೆ, ವೈಜ್ಞಾನಿಕ ಉಪಕರಣಗಳು, ಬೋಧನೆ, ಸಂಶೋಧನೆಗಳಿಗೆ ಪೇಟೆಂಟ್ ಬಂದಿರುವುದು, ಅಂತರರಾಷ್ಟ್ರೀಯ ಮಟ್ಟದಲ್ಲಿ ಸಂಶೋಧನಾ ಪ್ರಬಂಧಗಳ ಮಂಡನೆ, ಕಲಿಕೆ, ಬೋಧನೆ ಮತ್ತು ಸಂಶೋಧನಾ ಚಟುವಟಿಕೆಗಳಿಗೆ ತಂತ್ರಜ್ಞಾನದ ಅಳವಡಿಕೆ ಸೇರಿದಂತೆ ಅಂಶಗಳನ್ನು ಆಧರಿಸಿ ನ್ಯಾಕ್ ಸಮಿತಿಯು ಅಂಕ ಮತ್ತು ಗ್ರೇಡ್ಗಳನ್ನು ನೀಡುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>