ಸರ್ಕಾರಿ ಕಾರ್ಯಕ್ರಮಗಳಲ್ಲಿ ಕಡ್ಡಾಯವಾಗಿ ಬಳಸುವಂತೆ ಮಾಡಲು ಮತ್ತು ಶಾಲಾ– ಕಾಲೇಜುಗಳ ಗೋಡೆಗಳಲ್ಲಿ ಅಳವಡಿಸಲು ನಾಡದೇವತೆಯ ಪ್ರಮಾಣಿತ ಹಾಗೂ ಅಧಿಕೃತ ಚಿತ್ರವನ್ನು ಆಯ್ಕೆ ಮಾಡಿ ಶಿಫಾರಸು ಮಾಡಲು 2021ರ ಸೆ. 23ರಂದು ಮಹೇಂದ್ರ ನೇತೃತ್ವದಲ್ಲಿ ಚಿತ್ರ ಕಲಾವಿದರ ಸಮಿತಿಯನ್ನು ರಚಿಸಲಾಗಿತ್ತು. ಬೆಂಗಳೂರಿನ ಚೂಡಾಮಣಿ ನಂದಗೋಪಾಲ್, ರಾಯಚೂರಿನ ಎಚ್.ಎಚ್. ಮ್ಯಾದರ್, ಬೆಳಗಾವಿಯ ಬಾಬು ನಡೋಣಿ, ವಿಜಯಪುರದ ವಿ.ಎಸ್. ಕಡೇಮನಿ ಸಮಿತಿಯ ಸದಸ್ಯರಾಗಿದ್ದರು.