<p><strong>ಬೆಂಗಳೂರು:</strong> ಪರಿಶಿಷ್ಟ ಜಾತಿಗಳಿಗೆ ಸಂಬಂಧಿಸಿದಂತೆ ಒಳಮೀಸಲಾತಿ ಜಾರಿಗಾಗಿ ನ್ಯಾ. ನಾಗಮೋಹನದಾಸ್ ವರದಿಯನ್ನು ಆ.16ರಂದು ಅಂಗೀಕರಿಸಿ ಅನುಷ್ಠಾನಕ್ಕೆ ತರಬೇಕು ಎಂದು ‘ಸಾಮಾಜಿಕ ನ್ಯಾಯಕ್ಕಾಗಿ ಸಮಾನ ಮನಸ್ಕರು’ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.</p>.<p>ಬುಧವಾರ ನಡೆದ ಸಭೆಯಲ್ಲಿ ಸಾಹಿತಿಗಳು, ಚಿಂತಕರು, ಶಿಕ್ಷಣ ತಜ್ಞರು, ದಲಿತ ಚಳವಳಿಯ ಮುಖಂಡರು, ಪ್ರಾಧ್ಯಾಪಕರು, ಲಿಂಗತ್ವ ಅಲ್ಪಸಂಖ್ಯಾತರು, ವಿದ್ಯಾರ್ಥಿ ಸಂಘಟನೆಗಳ ನಾಯಕರು ಹಾಗೂ ಒಳಮೀಸಲಾತಿ ಪರ ಹೋರಾಟಗಾರರು ಭಾಗವಹಿಸಿದ್ದರು.</p>.<p>ನ್ಯಾ. ನಾಗಮೋಹನ್ದಾಸ್ ಆಯೋಗ ನೀಡಿರುವ ವರದಿಯಲ್ಲಿ ತಾಂತ್ರಿಕವಾಗಿ ಏನೇ ಸಮಸ್ಯೆ ಇದ್ದರೂ ತಾತ್ವಿಕವಾಗಿ ಸರಿ ಇದೆ. ಒಳ ಮೀಸಲಾತಿ ಬಗ್ಗೆ ಖಚಿತ ನಿಲುವು ತಳೆದು ಜಾರಿ ಮಾಡಬೇಕು ಎಂದು ಸಾಹಿತಿ ಕೋಟಿಗಾನಹಳ್ಳಿ ರಾಮಯ್ಯ ಹೇಳಿದರು.</p>.<p>‘ನ್ಯಾ. ಸದಾಶಿವ ಆಯೋಗದ ವರದಿ ಹಾಗೂ ಮಾಧುಸ್ವಾಮಿ ವರದಿಗೆ ಹೋಲಿಸಿದರೆ, ನ್ಯಾ. ನಾಗಮೋಹನ್ ದಾಸ್ ಆಯೋಗದ ವರದಿ ಬಹುತೇಕರಿಗೆ ಒಪ್ಪಿತವಾಗಿದೆ’ ಎಂದು ಪ್ರಾಧ್ಯಾಪಕ ರವಿಕುಮಾರ್ ಬಾಗಿ ಅಭಿಪ್ರಾಯ ವ್ಯಕ್ತಪಡಿಸಿದರು.</p>.<p>ಯಾವುದೇ ಸಮೀಕ್ಷೆಗಳು ಶೇಕಡ ನೂರರಷ್ಟು ಸರಿ ಇರುವುದಿಲ್ಲ. ಈ ವರದಿಯನ್ನು ದತ್ತಾಂಶ ಸಂಗ್ರಹಿಸಿ ತಯಾರಿಸಲಾಗಿದೆ. ತಪ್ಪುಗಳಿದ್ದರೆ ಸರಿಪಡಿಸಲು ಅವಕಾಶ ಇದೆ. ಸಾಮಾಜಿಕ ಜಾಲತಾಣಗಳಲ್ಲಿ ನಕಾರಾತ್ಮಕವಾಗಿ ಪ್ರಚಾರ ಮಾಡುವ ಬದಲು ಎಲ್ಲರೂ ಒಗ್ಗಟ್ಟಾಗಿ ವರದಿ ಜಾರಿಗೆ ಒತ್ತಾಯಿಸಬೇಕು ಎಂದು ಚಿಂತಕ ಸಿ.ಜಿ. ಲಕ್ಷ್ಮೀಪತಿ ಆಗ್ರಹಿಸಿದರು.</p>.<p>ಒಳಮೀಸಲಾತಿ ವಿವಾದವನ್ನು ಮುಂದಿಟ್ಟುಕೊಂಡು ಸಮುದಾಯಗಳನ್ನು ಒಡೆಯುವುದಕ್ಕೆ ಕೋಮುವಾದಿಗಳು ಕುಮ್ಮಕ್ಕು ನೀಡುತ್ತಿದ್ದಾರೆ. ಅದಕ್ಕಾಗಿ ನಮ್ಮಲ್ಲೇ ಕೆಲವರನ್ನು ಬಳಸಿಕೊಳ್ಳುತ್ತಿದ್ದಾರೆ. ಈ ವಿಚಾರದಲ್ಲಿ ಪ್ರಭುತ್ವ ನಿಲುವು ಬದಲಾಯಿಸಿದರೆ ಸಮುದಾಯಗಳಿಗೆ ನಷ್ಟ ಉಂಟಾಗಲಿದೆ ಎಂದು ಅಧ್ಯಾಪಕ ಹುಲಿಕುಂಟೆ ಮೂರ್ತಿ ಆತಂಕ ವ್ಯಕ್ತಪಡಿಸಿದರು.</p>.<p>ದಲಿತ ಸಂಘಷ ಸಮಿತಿ (ಅಂಬೇಡ್ಕರ್ ವಾದ) ಮಾವಳ್ಳಿ ಶಂಕರ್ ಮಾತನಾಡಿ, ‘ನಾಗಮೋಹನ್ ದಾಸ್ ಆಯೋಗ ನೀಡಿರುವ ಪ್ರವರ್ಗ ‘ಎ’, ‘ಬಿ’ ಹಾಗೆಯೇ ಉಳಿಸಿಕೊಳ್ಳಬೇಕು. ‘ಇ’ ಅಲ್ಲಿರುವ ಎಕೆ- ಎಡಿ ಅನ್ನು ‘ಸಿ’ ಗೆ ವರ್ಗಾವಣೆ ಮಾಡಿದರೆ ಅಸಮಾಧಾನ ಶಮನ ಆಗುತ್ತದೆ’ ಎಂದು ಸಲಹೆ ನೀಡಿದರು.</p>.<p>ಶಿಕ್ಷಣ ತಜ್ಞ ಬಿ.ಶ್ರೀಪಾದ ಭಟ್, ಪತ್ರಕರ್ತರಾದ ಹರ್ಷಕುಮಾರ್ ಕುಗ್ವೆ, ಎಚ್.ವಿ. ವಾಸು, ಸಾಹಿತಿ ಅಗ್ರಹಾರ ಕೃಷ್ಣಮೂರ್ತಿ, ಪ್ರಾಧ್ಯಾಪಕ ಎಸ್. ಗೋವಿಂದಯ್ಯ ಸೇರಿದಂತೆ ಹಲವರು ಅಭಿಪ್ರಾಯ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪರಿಶಿಷ್ಟ ಜಾತಿಗಳಿಗೆ ಸಂಬಂಧಿಸಿದಂತೆ ಒಳಮೀಸಲಾತಿ ಜಾರಿಗಾಗಿ ನ್ಯಾ. ನಾಗಮೋಹನದಾಸ್ ವರದಿಯನ್ನು ಆ.16ರಂದು ಅಂಗೀಕರಿಸಿ ಅನುಷ್ಠಾನಕ್ಕೆ ತರಬೇಕು ಎಂದು ‘ಸಾಮಾಜಿಕ ನ್ಯಾಯಕ್ಕಾಗಿ ಸಮಾನ ಮನಸ್ಕರು’ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.</p>.<p>ಬುಧವಾರ ನಡೆದ ಸಭೆಯಲ್ಲಿ ಸಾಹಿತಿಗಳು, ಚಿಂತಕರು, ಶಿಕ್ಷಣ ತಜ್ಞರು, ದಲಿತ ಚಳವಳಿಯ ಮುಖಂಡರು, ಪ್ರಾಧ್ಯಾಪಕರು, ಲಿಂಗತ್ವ ಅಲ್ಪಸಂಖ್ಯಾತರು, ವಿದ್ಯಾರ್ಥಿ ಸಂಘಟನೆಗಳ ನಾಯಕರು ಹಾಗೂ ಒಳಮೀಸಲಾತಿ ಪರ ಹೋರಾಟಗಾರರು ಭಾಗವಹಿಸಿದ್ದರು.</p>.<p>ನ್ಯಾ. ನಾಗಮೋಹನ್ದಾಸ್ ಆಯೋಗ ನೀಡಿರುವ ವರದಿಯಲ್ಲಿ ತಾಂತ್ರಿಕವಾಗಿ ಏನೇ ಸಮಸ್ಯೆ ಇದ್ದರೂ ತಾತ್ವಿಕವಾಗಿ ಸರಿ ಇದೆ. ಒಳ ಮೀಸಲಾತಿ ಬಗ್ಗೆ ಖಚಿತ ನಿಲುವು ತಳೆದು ಜಾರಿ ಮಾಡಬೇಕು ಎಂದು ಸಾಹಿತಿ ಕೋಟಿಗಾನಹಳ್ಳಿ ರಾಮಯ್ಯ ಹೇಳಿದರು.</p>.<p>‘ನ್ಯಾ. ಸದಾಶಿವ ಆಯೋಗದ ವರದಿ ಹಾಗೂ ಮಾಧುಸ್ವಾಮಿ ವರದಿಗೆ ಹೋಲಿಸಿದರೆ, ನ್ಯಾ. ನಾಗಮೋಹನ್ ದಾಸ್ ಆಯೋಗದ ವರದಿ ಬಹುತೇಕರಿಗೆ ಒಪ್ಪಿತವಾಗಿದೆ’ ಎಂದು ಪ್ರಾಧ್ಯಾಪಕ ರವಿಕುಮಾರ್ ಬಾಗಿ ಅಭಿಪ್ರಾಯ ವ್ಯಕ್ತಪಡಿಸಿದರು.</p>.<p>ಯಾವುದೇ ಸಮೀಕ್ಷೆಗಳು ಶೇಕಡ ನೂರರಷ್ಟು ಸರಿ ಇರುವುದಿಲ್ಲ. ಈ ವರದಿಯನ್ನು ದತ್ತಾಂಶ ಸಂಗ್ರಹಿಸಿ ತಯಾರಿಸಲಾಗಿದೆ. ತಪ್ಪುಗಳಿದ್ದರೆ ಸರಿಪಡಿಸಲು ಅವಕಾಶ ಇದೆ. ಸಾಮಾಜಿಕ ಜಾಲತಾಣಗಳಲ್ಲಿ ನಕಾರಾತ್ಮಕವಾಗಿ ಪ್ರಚಾರ ಮಾಡುವ ಬದಲು ಎಲ್ಲರೂ ಒಗ್ಗಟ್ಟಾಗಿ ವರದಿ ಜಾರಿಗೆ ಒತ್ತಾಯಿಸಬೇಕು ಎಂದು ಚಿಂತಕ ಸಿ.ಜಿ. ಲಕ್ಷ್ಮೀಪತಿ ಆಗ್ರಹಿಸಿದರು.</p>.<p>ಒಳಮೀಸಲಾತಿ ವಿವಾದವನ್ನು ಮುಂದಿಟ್ಟುಕೊಂಡು ಸಮುದಾಯಗಳನ್ನು ಒಡೆಯುವುದಕ್ಕೆ ಕೋಮುವಾದಿಗಳು ಕುಮ್ಮಕ್ಕು ನೀಡುತ್ತಿದ್ದಾರೆ. ಅದಕ್ಕಾಗಿ ನಮ್ಮಲ್ಲೇ ಕೆಲವರನ್ನು ಬಳಸಿಕೊಳ್ಳುತ್ತಿದ್ದಾರೆ. ಈ ವಿಚಾರದಲ್ಲಿ ಪ್ರಭುತ್ವ ನಿಲುವು ಬದಲಾಯಿಸಿದರೆ ಸಮುದಾಯಗಳಿಗೆ ನಷ್ಟ ಉಂಟಾಗಲಿದೆ ಎಂದು ಅಧ್ಯಾಪಕ ಹುಲಿಕುಂಟೆ ಮೂರ್ತಿ ಆತಂಕ ವ್ಯಕ್ತಪಡಿಸಿದರು.</p>.<p>ದಲಿತ ಸಂಘಷ ಸಮಿತಿ (ಅಂಬೇಡ್ಕರ್ ವಾದ) ಮಾವಳ್ಳಿ ಶಂಕರ್ ಮಾತನಾಡಿ, ‘ನಾಗಮೋಹನ್ ದಾಸ್ ಆಯೋಗ ನೀಡಿರುವ ಪ್ರವರ್ಗ ‘ಎ’, ‘ಬಿ’ ಹಾಗೆಯೇ ಉಳಿಸಿಕೊಳ್ಳಬೇಕು. ‘ಇ’ ಅಲ್ಲಿರುವ ಎಕೆ- ಎಡಿ ಅನ್ನು ‘ಸಿ’ ಗೆ ವರ್ಗಾವಣೆ ಮಾಡಿದರೆ ಅಸಮಾಧಾನ ಶಮನ ಆಗುತ್ತದೆ’ ಎಂದು ಸಲಹೆ ನೀಡಿದರು.</p>.<p>ಶಿಕ್ಷಣ ತಜ್ಞ ಬಿ.ಶ್ರೀಪಾದ ಭಟ್, ಪತ್ರಕರ್ತರಾದ ಹರ್ಷಕುಮಾರ್ ಕುಗ್ವೆ, ಎಚ್.ವಿ. ವಾಸು, ಸಾಹಿತಿ ಅಗ್ರಹಾರ ಕೃಷ್ಣಮೂರ್ತಿ, ಪ್ರಾಧ್ಯಾಪಕ ಎಸ್. ಗೋವಿಂದಯ್ಯ ಸೇರಿದಂತೆ ಹಲವರು ಅಭಿಪ್ರಾಯ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>