ವರ್ಷಂಪ್ರತಿ ನಾಗರ ಪಂಚಮಿಯಂದು ಸುಬ್ರಹ್ಮಣ್ಯದಲ್ಲಿ ಭಕ್ತರು ಕಿಕ್ಕಿರಿದು ತುಂಬಿರುತ್ತಿದ್ದರು. ಸೀಯಾಳ, ಹಾಲು, ಹಿಂಗಾರ, ಅರಶಿಣ ಇತ್ಯಾದಿಗಳನ್ನು ಸಮರ್ಪಿಸಿ ಆರಾಧಿಸುತ್ತಿದ್ದರು. ಆದರೆ, ಈ ಬಾರಿ ಕೊರೊನಾ ಕಾರಣ ದೇಗುಲದ ಸಿಬ್ಬಂದಿ ಮತ್ತು ಅರ್ಚಕರಿಗೆ ಮಾತ್ರ ಪ್ರವೇಶವಿದ್ದು, ಸಾಂಪ್ರದಾಯಿಕ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು. ಭಕ್ತರಿಗೆ ನಿರ್ಬಂಧ ವಿಧಿಸಲಾಗಿತ್ತು.