ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಗರಪಂಚಮಿ | ಕುಕ್ಕೆ ದೇಗುಲಕ್ಕೆ ಬಂದ ‘ನಾಗರಾಜ’

ಕರಾವಳಿಯಲ್ಲಿ ನಾಗರ ಪಂಚಮಿ ಸಂಭ್ರಮ
Last Updated 25 ಜುಲೈ 2020, 8:40 IST
ಅಕ್ಷರ ಗಾತ್ರ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅಂಗಣಕ್ಕೆ ನಾಗರಪಂಚಮಿಯ ಶನಿವಾರವೇ ನಾಗರಹಾವು ಬಂದಿದೆ.

ಭಾರತದಲ್ಲೇ ನಾಗ ಆರಾಧನೆಯ ಪ್ರಮುಖ ಸ್ಥಳಗಳಲ್ಲಿ ಒಂದಾದ ಕುಕ್ಕೆ ಸುಬ್ರಹ್ಮಣ್ಯದ ನಾಗ ಮಂಟಪದಲ್ಲಿ ಶನಿವಾರ ಬೆಳಿಗ್ಗೆ ಅಭಿಷೇಕ ನೆರವೇರಿಸಿ, ಪೂಜೆ ಮಾಡುವ ವೇಳೆಯಲ್ಲಿ ಗರ್ಭಗುಡಿಯ ಹೊರಾಂಗಣದಲ್ಲಿ ನಾಗರ ಹಾವು ಕಂಡುಬಂದಿದೆ. ತಕ್ಷಣವೇ ಅರ್ಚರು ಹಾವಿಗೆ ಹಾಲನ್ನು ನೀಡಿದರು. ಬಳಿಕ ನಾಗರ ಹಾವು ಹೋಗಿದೆ.

‘ಸುಬ್ರಹ್ಮಣ್ಯ ದೇಗುಲದ ಪ್ರಮುಖ ಗರ್ಭಗುಡಿಯ ಹಿಂಭಾಗದಲ್ಲೇ ಹುತ್ತವಿದ್ದು, ವರ್ಷಕ್ಕೊಮ್ಮೆ ಇಲ್ಲಿಂದ ಮೂಲ ಮೃತ್ತಿಕಾ ಪ್ರಸಾದ (ಮೂರು ಹಿಡಿ ಹುತ್ತದ ಮಣ್ಣು) ತೆಗೆಯಲಾಗುತ್ತದೆ. ಇದು ಪ್ರಮುಖ ಪ್ರಸಾದವಾಗಿದೆ. ಇಲ್ಲಿನ ಆದಿ ಸುಬ್ರಹ್ಮಣ್ಯ ಹಾಗೂ ಮುಖ್ಯ ದೇಗುಲದಲ್ಲೂ ಆಗಾಗ್ಗೆ ನಾಗರ ಹಾವು ಬಂದು ಹೋಗುತ್ತದೆ. ಆದರೆ, ಈ ಬಾರಿ ನಾಗರ ಪಂಚಮಿಯಂದೇ ಬಂದಿರುವುದು ವಿಶೇಷವಾಗಿದೆ’ ಎಂದು ದೇಗುಲದ ಸಿಬ್ಬಂದಿ ಧನ್ಯತೆ ವ್ಯಕ್ತಪಡಿಸಿದರು.

ವರ್ಷಂಪ್ರತಿ ನಾಗರ ಪಂಚಮಿಯಂದು ಸುಬ್ರಹ್ಮಣ್ಯದಲ್ಲಿ ಭಕ್ತರು ಕಿಕ್ಕಿರಿದು ತುಂಬಿರುತ್ತಿದ್ದರು. ಸೀಯಾಳ, ಹಾಲು, ಹಿಂಗಾರ, ಅರಶಿಣ ಇತ್ಯಾದಿಗಳನ್ನು ಸಮರ್ಪಿಸಿ ಆರಾಧಿಸುತ್ತಿದ್ದರು. ಆದರೆ, ಈ ಬಾರಿ ಕೊರೊನಾ ಕಾರಣ ದೇಗುಲದ ಸಿಬ್ಬಂದಿ ಮತ್ತು ಅರ್ಚಕರಿಗೆ ಮಾತ್ರ ಪ್ರವೇಶವಿದ್ದು, ಸಾಂಪ್ರದಾಯಿಕ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು. ಭಕ್ತರಿಗೆ ನಿರ್ಬಂಧ ವಿಧಿಸಲಾಗಿತ್ತು.

ಇಲ್ಲಿನ ನಾಗನ ಆರಾಧನೆಗೆ ಸಂಬಂಧಿಸಿದಂತೆ ನಾಗದೋಷ ಪರಿಹಾರ, ನಾಗಮಂಡಲ, ಆಶ್ಲೇಷ ಬಲಿ, ನಾಗ ತಂಬಿಲ, ಅಭಿಷೇಕಗಳು ನಡೆಯುತ್ತವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT