ಯಡಿಯೂರಪ್ಪ ಅವರ ಡಾಲರ್ಸ್ ಕಾಲೊನಿಯಲ್ಲಿರುವ ನಿವಾಸಕ್ಕೆ ಭೇಟಿ ನೀಡಿ ವಾಪಸ್ ತೆರಳುವ ವೇಳೆ ಪತ್ರಕರ್ತರ ಜತೆ ಮಾತನಾಡದೆ ತೆರಳಿದ್ದ ಅವರು ತುಸು ಹೊತ್ತಿನಲ್ಲಿ ಮತ್ತೆ ಅಲ್ಲಿಗಾಗಮಿಸಿದರು. ಬಳಿಕ ಮಾತನಾಡಿ, ‘ಮುಖ್ಯಮಂತ್ರಿ ಅವರೇ ನಮಗೆ ಮಾರ್ಗದರ್ಶಕರು. ಅವರ ಸಲಹೆಯಂತೆಯೇ ಪಕ್ಷದ ಸಂಘಟನೆ ನಡೆಯುತ್ತಿದೆ’ ಎಂದು ಹೇಳಿದರು.
ಅನರ್ಹ ಶಾಸಕರಿಗೆ ಅನ್ಯಾಯ ಮಾಡುವುದಿಲ್ಲ ಎಂದು ನಳಿನ್ ಸ್ಪಷ್ಟಪಡಿಸಿದರು.
‘ಅನರ್ಹ ಶಾಸಕರ ಕುರಿತು, ಅವರಿಗೆ ಹೇಗೆ ನ್ಯಾಯ ಕೊಡಬೇಕು ಎಂಬ ಬಗ್ಗೆ ನಾನು, ಯಡಿಯೂರಪ್ಪ ಮತ್ತು ಪಕ್ಷದ ಅಧ್ಯಕ್ಷ ಅಮಿತ್ ಶಾ ಚರ್ಚಿಸಿ ನಿರ್ಧರಿಸಲಿದ್ದೇವೆ. ಅನ್ಯಾಯ ಆಗಲು ಬಿಡುವುದಿಲ್ಲ’ ಎಂದು ಅವರು ಹೇಳಿದರು.
ಮಾತನಾಡದೆ ತೆರಳಿದ್ದಕ್ಕೆ ಸಮಜಾಯಿಷಿ:‘ನಾನು 11.30ರ ವಿಮಾನದಲ್ಲಿ ಮಂಗಳೂರಿಗೆ ತೆರಳಬೇಕಿತ್ತು. ಅದಕ್ಕಾಗಿ ಧಾವಿಸಿ ಹೋದೆ, ನೀವು ಇಲ್ಲಿ ಕಾಯುತ್ತಿದ್ದುದೂ ಗೊತ್ತಾಗಲಿಲ್ಲ ಎಂದು ನಳಿನ್ ಸಮಜಾಯಿಷಿ ನೀಡಿದರು.