<p><strong>ಹೊನ್ನಾಳಿ: </strong>‘ದೇಶವನ್ನಾಳಿದ ಕಾಂಗ್ರೆಸ್ ಪಕ್ಷಕ್ಕೆ ಗಾಂಧಿ ಶಾಪ, ಅಂಬೇಡ್ಕರ್ ಶಾಪ, ಗೋಮಾತೆ ಶಾಪಗಳು ಕಾಡುತ್ತಿವೆ. ಈ ಪಕ್ಷಕ್ಕೆ ಮುಂದೆ ಭವಿಷ್ಯವಿಲ್ಲ’ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ಕುಮಾರ್ ಕಟೀಲ್ ಅಭಿಪ್ರಾಯಪಟ್ಟರು.</p>.<p>ಭಾನುವಾರ ಇಲ್ಲಿ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ‘ಸ್ವಾತಂತ್ರ್ಯಾ ನಂತರ ಕಾಂಗ್ರೆಸ್ ವಿಸರ್ಜಿಸುವಂತೆ ಗಾಂಧೀಜಿ ಹೇಳಿದ್ದರು. ಆದರೆ ಪಕ್ಷ ಆ ಕೆಲಸ ಮಾಡಲಿಲ್ಲ, ಅವರು ಹೇಳಿದಂತೆ ರಾಮರಾಜ್ಯವನ್ನೂ ಮಾಡಲಿಲ್ಲ. ಹೀಗಾಗಿ, ಅದು ಗಾಂಧಿಯವರ ಶಾಪಕ್ಕೆ ಗುರಿಯಾಗಿದೆ’ ಎಂದರು.</p>.<p>‘ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ಎರಡು ಚುನಾವಣೆಗಳಲ್ಲಿ ಸೋಲಿಸಿತು. ಹೀಗಾಗಿ ಅಂಬೇಡ್ಕರ್ ಶಾಪ ಎದುರಿಸುತ್ತಿದೆ. ಮೂರನೆಯದಾಗಿ ಕಾಂಗ್ರೆಸ್ ಆರಂಭದಲ್ಲಿ ಆಕಳು–ಕರುವನ್ನು ಪಕ್ಷದ ಚಿಹ್ನೆಯಾಗಿ ಮಾಡಿಕೊಂಡಿತ್ತು. ಗೋಮಾತೆ ಹೆಸರಲ್ಲಿ ಅಧಿಕಾರಕ್ಕೆ ಬಂದು, ನಂತರ ಗೋಮಾತೆಯನ್ನೇ ಮರೆಯಿತು. ಹೀಗಾಗಿ ಅದರ ಶಾಪ ಕಾಡುತ್ತಿದೆ’ ಎಂದು ವ್ಯಂಗ್ಯವಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊನ್ನಾಳಿ: </strong>‘ದೇಶವನ್ನಾಳಿದ ಕಾಂಗ್ರೆಸ್ ಪಕ್ಷಕ್ಕೆ ಗಾಂಧಿ ಶಾಪ, ಅಂಬೇಡ್ಕರ್ ಶಾಪ, ಗೋಮಾತೆ ಶಾಪಗಳು ಕಾಡುತ್ತಿವೆ. ಈ ಪಕ್ಷಕ್ಕೆ ಮುಂದೆ ಭವಿಷ್ಯವಿಲ್ಲ’ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ಕುಮಾರ್ ಕಟೀಲ್ ಅಭಿಪ್ರಾಯಪಟ್ಟರು.</p>.<p>ಭಾನುವಾರ ಇಲ್ಲಿ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ‘ಸ್ವಾತಂತ್ರ್ಯಾ ನಂತರ ಕಾಂಗ್ರೆಸ್ ವಿಸರ್ಜಿಸುವಂತೆ ಗಾಂಧೀಜಿ ಹೇಳಿದ್ದರು. ಆದರೆ ಪಕ್ಷ ಆ ಕೆಲಸ ಮಾಡಲಿಲ್ಲ, ಅವರು ಹೇಳಿದಂತೆ ರಾಮರಾಜ್ಯವನ್ನೂ ಮಾಡಲಿಲ್ಲ. ಹೀಗಾಗಿ, ಅದು ಗಾಂಧಿಯವರ ಶಾಪಕ್ಕೆ ಗುರಿಯಾಗಿದೆ’ ಎಂದರು.</p>.<p>‘ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ಎರಡು ಚುನಾವಣೆಗಳಲ್ಲಿ ಸೋಲಿಸಿತು. ಹೀಗಾಗಿ ಅಂಬೇಡ್ಕರ್ ಶಾಪ ಎದುರಿಸುತ್ತಿದೆ. ಮೂರನೆಯದಾಗಿ ಕಾಂಗ್ರೆಸ್ ಆರಂಭದಲ್ಲಿ ಆಕಳು–ಕರುವನ್ನು ಪಕ್ಷದ ಚಿಹ್ನೆಯಾಗಿ ಮಾಡಿಕೊಂಡಿತ್ತು. ಗೋಮಾತೆ ಹೆಸರಲ್ಲಿ ಅಧಿಕಾರಕ್ಕೆ ಬಂದು, ನಂತರ ಗೋಮಾತೆಯನ್ನೇ ಮರೆಯಿತು. ಹೀಗಾಗಿ ಅದರ ಶಾಪ ಕಾಡುತ್ತಿದೆ’ ಎಂದು ವ್ಯಂಗ್ಯವಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>