<p><strong>ಮೈಸೂರು:</strong> ಇಲ್ಲಿನ ಮೈಸೂರು ವಿಶ್ವವಿದ್ಯಾನಿಲಯದ ಆವರಣದಲ್ಲಿ ‘ಫ್ರೀ ಕಾಶ್ಮೀರ’ ಫಲಕ ಹಿಡಿದಿದ್ದ ಬಿ.ನಳಿನಿ ಅವರು ಮಂಗಳವಾರ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಮಾಧ್ಯಮದವರತ್ತ ಕಿಡಿಕಾರಿದ್ದಕ್ಕೆ ಕ್ಷಮೆ ಯಾಚಿಸಿದ್ದಾರೆ.</p>.<p>ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಘಟನೆ ಸಂಬಂಧ ವಿಷಾದ ವ್ಯಕ್ತಪಡಿಸಿದ್ದಾರೆ. ಮುಂದೆ ಹೀಗೆ ವರ್ತಿಸುವುದಿಲ್ಲ ಎಂದು ಹೇಳಿದ್ದಾರೆ.</p>.<p>‘ನಾನಿರುವ ಪರಿಸ್ಥಿತಿ ನನ್ನನ್ನು ಈ ರೀತಿ ವರ್ತಿಸುವಂತೆ ಮಾಡಿತು. ಇದನ್ನು ಎಲ್ಲರೂ ಅರ್ಥ ಮಾಡಿಕೊಳ್ಳುತ್ತೀರಿ ಎಂದು ಭಾವಿಸಿದ್ದೇನೆ. ಈಗ ನನಗೆ ಪಶ್ಚಾತ್ತಾಪವಾಗುತ್ತಿದೆ. ನಾನು ನನ್ನನ್ನು ಬದಲಾಯಿಸಿಕೊಳ್ಳಲು ಹಾಗೂ ಇನ್ನೂ ಹೆಚ್ಚಿನ ಜವಾಬ್ದಾರಿಯುತ ನಡವಳಿಕೆ ಹೊಂದಲು ಪ್ರಯತ್ನಿಸುತ್ತೇನೆ’ ಎಂದು ಅವರು ತಿಳಿಸಿದ್ದಾರೆ.</p>.<p>ಜವಹರಲಾಲ್ ನೆಹರು ವಿಶ್ವವಿದ್ಯಾಲಯದ ಆವರಣದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಹಲ್ಲೆ ಖಂಡಿಸಿ ಜ. 8ರಂದು ಮೈಸೂರು ವಿಶ್ವವಿದ್ಯಾಲಯದ ಆವರಣದಲ್ಲಿ ಪ್ರತಿಭಟನೆ ನಡೆಯುತ್ತಿದ್ದಾಗ ಬಿ.ನಳಿನಿ ‘ಫ್ರೀ ಕಾಶ್ಮಿರ’ ಎಂಬ ಫಲಕ ಪ್ರದರ್ಶಿಸಿ ವಿವಾದಕ್ಕೀಡಾಗಿದ್ದರು.</p>.<p>ನಂತರ, ಇವರು ಮತ್ತು ಆಯೋಜಕರ ವಿರುದ್ಧ ಸ್ವಯಂಪ್ರೇರಿತವಾಗಿ ಪೊಲೀಸರು ದೇಶದ್ರೋಹ ಪ್ರಕರಣ ದಾಖಲಿಸಿದ್ದರು. ಜಿಲ್ಲಾ ವಕೀಲರ ಸಂಘವು ಇವರ ಪರ ವಕಾಲತ್ತು ವಹಿಸಬಾರದು ಎಂದು ನಿರ್ಣಯ ಕೈಗೊಂಡಿತು. ನಳಿನಿ ಅವರ ನಿರೀಕ್ಷಣಾ ಜಾಮೀನು ಅರ್ಜಿಗೆ ಮಂಗಳವಾರ ನ್ಯಾಯಾಲಯದಲ್ಲಿ ಪೊಲೀಸರು ಆಕ್ಷೇಪ ಸಲ್ಲಿಸಬೇಕಿತ್ತು. ಈ ವೇಳೆ ಅವರು ನ್ಯಾಯಾಲಯದ ಆವರಣದಲ್ಲಿ ಮಾಧ್ಯಮದವರತ್ತ ಕಿಡಿಕಾರಿದ್ದರು. ‘ನೋ ಹ್ಯುಮಾನಿಟಿ’ ಎಂದು ಘೋಷಣೆ ಕೂಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಇಲ್ಲಿನ ಮೈಸೂರು ವಿಶ್ವವಿದ್ಯಾನಿಲಯದ ಆವರಣದಲ್ಲಿ ‘ಫ್ರೀ ಕಾಶ್ಮೀರ’ ಫಲಕ ಹಿಡಿದಿದ್ದ ಬಿ.ನಳಿನಿ ಅವರು ಮಂಗಳವಾರ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಮಾಧ್ಯಮದವರತ್ತ ಕಿಡಿಕಾರಿದ್ದಕ್ಕೆ ಕ್ಷಮೆ ಯಾಚಿಸಿದ್ದಾರೆ.</p>.<p>ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಘಟನೆ ಸಂಬಂಧ ವಿಷಾದ ವ್ಯಕ್ತಪಡಿಸಿದ್ದಾರೆ. ಮುಂದೆ ಹೀಗೆ ವರ್ತಿಸುವುದಿಲ್ಲ ಎಂದು ಹೇಳಿದ್ದಾರೆ.</p>.<p>‘ನಾನಿರುವ ಪರಿಸ್ಥಿತಿ ನನ್ನನ್ನು ಈ ರೀತಿ ವರ್ತಿಸುವಂತೆ ಮಾಡಿತು. ಇದನ್ನು ಎಲ್ಲರೂ ಅರ್ಥ ಮಾಡಿಕೊಳ್ಳುತ್ತೀರಿ ಎಂದು ಭಾವಿಸಿದ್ದೇನೆ. ಈಗ ನನಗೆ ಪಶ್ಚಾತ್ತಾಪವಾಗುತ್ತಿದೆ. ನಾನು ನನ್ನನ್ನು ಬದಲಾಯಿಸಿಕೊಳ್ಳಲು ಹಾಗೂ ಇನ್ನೂ ಹೆಚ್ಚಿನ ಜವಾಬ್ದಾರಿಯುತ ನಡವಳಿಕೆ ಹೊಂದಲು ಪ್ರಯತ್ನಿಸುತ್ತೇನೆ’ ಎಂದು ಅವರು ತಿಳಿಸಿದ್ದಾರೆ.</p>.<p>ಜವಹರಲಾಲ್ ನೆಹರು ವಿಶ್ವವಿದ್ಯಾಲಯದ ಆವರಣದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಹಲ್ಲೆ ಖಂಡಿಸಿ ಜ. 8ರಂದು ಮೈಸೂರು ವಿಶ್ವವಿದ್ಯಾಲಯದ ಆವರಣದಲ್ಲಿ ಪ್ರತಿಭಟನೆ ನಡೆಯುತ್ತಿದ್ದಾಗ ಬಿ.ನಳಿನಿ ‘ಫ್ರೀ ಕಾಶ್ಮಿರ’ ಎಂಬ ಫಲಕ ಪ್ರದರ್ಶಿಸಿ ವಿವಾದಕ್ಕೀಡಾಗಿದ್ದರು.</p>.<p>ನಂತರ, ಇವರು ಮತ್ತು ಆಯೋಜಕರ ವಿರುದ್ಧ ಸ್ವಯಂಪ್ರೇರಿತವಾಗಿ ಪೊಲೀಸರು ದೇಶದ್ರೋಹ ಪ್ರಕರಣ ದಾಖಲಿಸಿದ್ದರು. ಜಿಲ್ಲಾ ವಕೀಲರ ಸಂಘವು ಇವರ ಪರ ವಕಾಲತ್ತು ವಹಿಸಬಾರದು ಎಂದು ನಿರ್ಣಯ ಕೈಗೊಂಡಿತು. ನಳಿನಿ ಅವರ ನಿರೀಕ್ಷಣಾ ಜಾಮೀನು ಅರ್ಜಿಗೆ ಮಂಗಳವಾರ ನ್ಯಾಯಾಲಯದಲ್ಲಿ ಪೊಲೀಸರು ಆಕ್ಷೇಪ ಸಲ್ಲಿಸಬೇಕಿತ್ತು. ಈ ವೇಳೆ ಅವರು ನ್ಯಾಯಾಲಯದ ಆವರಣದಲ್ಲಿ ಮಾಧ್ಯಮದವರತ್ತ ಕಿಡಿಕಾರಿದ್ದರು. ‘ನೋ ಹ್ಯುಮಾನಿಟಿ’ ಎಂದು ಘೋಷಣೆ ಕೂಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>