ಶಿವಮೊಗ್ಗದಲ್ಲಿ ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ರಾಘವೇಂದ್ರ ನಾಮಪತ್ರ ಸಲ್ಲಿಸುವ ಮೊದಲು ನಡೆಸಿದ ಮೆರವಣಿಗೆ ಬಿಜೆಪಿ–ಜೆಡಿಎಸ್ ಒಗ್ಗಟ್ಟು ಪ್ರದರ್ಶನಕ್ಕೆ ವೇದಿಕೆಯಾಯಿತು. ಯಡಿಯೂರಪ್ಪ, ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ, ಶಾಸಕ ಬಸವರಾಜ ಬೊಮ್ಮಾಯಿ, ಮಾಜಿ ಶಾಸಕರಾದ ಸಿ.ಟಿ. ರವಿ, ಕುಮಾರ್ ಬಂಗಾರಪ್ಪ ಮತ್ತಿತರರರು ಮೆರವಣಿಗೆಯಲ್ಲಿ ಪಾಲ್ಗೊಂಡರು.