ಬೆಂಗಳೂರು: ಕರ್ನಾಟಕದಲ್ಲಿ ‘ನಂದಿನಿ’ ಬ್ರ್ಯಾಂಡ್ ಜೊತೆಗೆ ‘ಅಮೂಲ್‘ ಉತ್ಪನ್ನಗಳ ಮಾರಾಟದ ವಿವಾದ ತಣ್ಣಗಾದ ಬೆನ್ನಲೇ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನಂದಿನಿ ನಮ್ಮ ಕರ್ನಾಟಕದ ಹೆಮ್ಮೆ ಎಂದು ಟ್ವೀಟ್ ಮಾಡಿದ್ದಾರೆ.
ಭಾನುವಾರ ರಾಜ್ಯಕ್ಕೆ ಆಗಮಿಸಿದ್ದ ರಾಹುಲ್ ಗಾಂಧಿ ಅವರು ಬೆಂಗಳೂರಿನ ಅಂಗಡಿಯೊಂದರಲ್ಲಿ ನಂದಿನಿ ಐಸ್ ಕ್ರೀಮ್ ಖರೀದಿಸಿ ಸವಿದಿದ್ದರು. ಈ ವೇಳೆ ಡಿ.ಕೆ.ಶಿವಕುಮಾರ್, ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಇದ್ದರು.
Glad that Rahul Gandhi thinks Nandini is the best. There is no doubt about it.
I request him to intervene in Kerala for smooth sale of Nandini. If not, this will be yet another gimmick.
Waiting for Rahul Gandhi to make a public announcement in Kerala for free access to Nandini. https://t.co/x5X6VCLNuz
ನಂದಿನಿ ನಮ್ಮ ಕರ್ನಾಟಕದ ಹೆಮ್ಮೆ, ನಂದಿನಿ ಅತ್ಯುತ್ತಮವಾದುದು ಎಂದು ರಾಹುಲ್ ಗಾಂಧಿ ಫೋಟೊ ಟ್ವೀಟ್ ಮಾಡಿದ್ದರು.
ರಾಹುಲ್ ಗಾಂಧಿಯವರ ಟ್ವೀಟ್ಗೆ ಪ್ರತಿಕ್ರಿಯಿಸಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಕೇರಳದಲ್ಲಿ ನಂದಿನಿ ಮಾರಾಟ ಸುಗಮವಾಗಬೇಕು. ಈ ಬಗ್ಗೆ ನೀವು ಮಧ್ಯಪ್ರವೇಶಿಸಬೇಕು ಎಂದು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.
ಕರ್ನಾಟಕದಲ್ಲಿ ಅಮೂಲ್ ಬ್ರ್ಯಾಂಡ್ನ ಹಾಲು, ಮೊಸರು ಮಾರಾಟ ಪ್ರಕ್ರಿಯೆಯನ್ನು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಬಲವಾಗಿ ಖಂಡಿಸಿದ್ದವು. ನಂತರ ‘ಅಮೂಲ್ ಉತ್ಪನ್ನಗಳು ಪೂರ್ಣ ಪ್ರಮಾಣದಲ್ಲಿ ಕರ್ನಾಟಕ ಮಾರುಕಟ್ಟೆ ಪ್ರವೇಶಿಸುವುದಿಲ್ಲ ಎಂದು ಅಮೂಲ್ ಸಂಸ್ಥೆ ತಿಳಿಸಿತ್ತು.