ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ, ಕೆಎಂಫ್ ಅಧ್ಯಕ್ಷರು ಹಾಲಿನ ದರವನ್ನು ಲೀಟರಿಗೆ ₹5 ಹೆಚ್ಚಿಸುತ್ತೇವೆ ಎಂದು ಏಕಾಏಕಿ ಹೇಳುವ ಮೂಲಕ ರಾಜ್ಯದ ಪ್ರಜೆಗಳ ಜೇಬಿಗೆ ಕನ್ನ ಹಾಕಿದೆ. ಸಿದ್ದರಾಮಯ್ಯ ಅವರ ಎಟಿಎಂ ಸರ್ಕಾರದಲ್ಲಿ ಈಗಾಗಲೇ ದಿನ ಬಳಕೆ ಸಾಮಗ್ರಿಗಳ ಬೆಲೆ ಗಗನಕ್ಕೇರಿದೆ. ಇದೀಗ ಹಾಲಿನ ದರವನ್ನೂ ಏರಿಸುವ ಮೂಲಕ ರಾಜ್ಯದ ಬಡ ಜನರ ಮೇಲೆ ಬರೆ ಎಳೆಯುತ್ತಿದೆ‘ ಎಂದು ಹೇಳಿದೆ.
ಅಲ್ಲದೆ, ಈ ಜನದ್ರೋಹಿ ನಿರ್ಧಾರದಿಂದ ಸರ್ಕಾರ ದೂರ ಉಳಿಯಬೇಕೆಂದು ಬಿಜೆಪಿ ಆಗ್ರಹಿಸುತ್ತದೆ ಎಂದು ನುಡಿದಿದೆ.