<p><strong>ನವದೆಹಲಿ</strong>: ನಂಜನಗೂಡು– ನಿಲಂಬೂರು ರೈಲು ಮಾರ್ಗ ನಿರ್ಮಾಣಕ್ಕೆ ಹೊಸದಾಗಿ ಅಂತಿಮ ಸ್ಥಳ ಸಮೀಕ್ಷೆ ನಡೆಸಲಾಗುವುದು ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದರು. </p>.<p>ಲೋಕಸಭೆಯಲ್ಲಿ ಬುಧವಾರ ಪ್ರಶ್ನೋತ್ತರ ಅವಧಿಯಲ್ಲಿ ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ‘ರೈಲ್ವೆ ಯೋಜನೆಗೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲು ಕ್ಷೇತ್ರ ಸಮೀಕ್ಷೆ ಪೂರ್ಣಗೊಂಡಿದೆ’ ಎಂದರು. </p>.<p>‘ಈ ಮಾರ್ಗ ನಿರ್ಮಾಣಕ್ಕೆ 2007–08ರಲ್ಲಿ ಸಮೀಕ್ಷೆ ಕೈಗೆತ್ತಿಕೊಳ್ಳಲಾಗಿತ್ತು. ಪ್ರಯಾಣಿಕರ ದಟ್ಟಣೆ ಕಡಿಮೆ ಇರಲಿದ್ದು, ಯೋಜನೆ ಅನುಷ್ಠಾನ ಕಾರ್ಯಸಾಧುವಲ್ಲ ಎಂದು ಸಮೀಕ್ಷೆ ವರದಿ ತಿಳಿಸಿತ್ತು. ಹೀಗಾಗಿ, ಯೋಜನೆ ಕೈಗೆತ್ತಿಕೊಂಡಿರಲಿಲ್ಲ’ ಎಂದರು. </p>.<p>236 ಕಿ.ಮೀ ಉದ್ದದ ಮಾರ್ಗದ ಈ ಯೋಜನೆಯು ಕರ್ನಾಟಕ, ತಮಿಳುನಾಡು ಹಾಗೂ ಕೇರಳವನ್ನು ಸಂಪರ್ಕಿಸುತ್ತದೆ. ಕರ್ನಾಟಕದ ಬಂಡೀಪುರ, ತಮಿಳುನಾಡಿನ ಮುಧುಮಲೆ ಹಾಗೂ ಕೇರಳದ ವಯನಾಡ್ ಸಂರಕ್ಷಿತ ಅರಣ್ಯ ಪ್ರದೇಶದ ಮೂಲಕ ಈ ಮಾರ್ಗ ಹಾದು ಹೋಗುತ್ತದೆ. ಹಾಗಾಗಿ, ಈ ಯೋಜನೆಗೆ ಕರ್ನಾಟಕ ಸರ್ಕಾರ ವಿರೋಧ ವ್ಯಕ್ತಪಡಿಸಿದೆ.</p>.<p><strong>ಬ್ರಾಡ್ಗೇಜ್ ಮಾರ್ಗಕ್ಕೆ ಡಿಪಿಆರ್</strong></p>.<p>ಬಳ್ಳಾರಿ ಸಂಸದ ಇ.ತುಕಾರಾಂ ಪ್ರಶ್ನೆಗೆ ಉತ್ತರ ನೀಡಿರುವ ಅಶ್ವಿನಿ ವೈಷ್ಣವ್, ‘ಬಳ್ಳಾರಿಯ ಸ್ವಾಮಿಹಳ್ಳಿ ಹಾಗೂ ಆಂಧ್ರ ಪ್ರದೇಶದ ರಾಯದುರ್ಗ ನಡುವೆ ಬ್ರಾಡ್ಗೇಜ್ ರೈಲು ಮಾರ್ಗ ನಿರ್ಮಾಣಕ್ಕೆ ಅಂತಿಮ ಸ್ಥಳ ಸಮೀಕ್ಷೆ ನಡೆಸಲಾಗಿದ್ದು, ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲಾಗುವುದು’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ನಂಜನಗೂಡು– ನಿಲಂಬೂರು ರೈಲು ಮಾರ್ಗ ನಿರ್ಮಾಣಕ್ಕೆ ಹೊಸದಾಗಿ ಅಂತಿಮ ಸ್ಥಳ ಸಮೀಕ್ಷೆ ನಡೆಸಲಾಗುವುದು ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದರು. </p>.<p>ಲೋಕಸಭೆಯಲ್ಲಿ ಬುಧವಾರ ಪ್ರಶ್ನೋತ್ತರ ಅವಧಿಯಲ್ಲಿ ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ‘ರೈಲ್ವೆ ಯೋಜನೆಗೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲು ಕ್ಷೇತ್ರ ಸಮೀಕ್ಷೆ ಪೂರ್ಣಗೊಂಡಿದೆ’ ಎಂದರು. </p>.<p>‘ಈ ಮಾರ್ಗ ನಿರ್ಮಾಣಕ್ಕೆ 2007–08ರಲ್ಲಿ ಸಮೀಕ್ಷೆ ಕೈಗೆತ್ತಿಕೊಳ್ಳಲಾಗಿತ್ತು. ಪ್ರಯಾಣಿಕರ ದಟ್ಟಣೆ ಕಡಿಮೆ ಇರಲಿದ್ದು, ಯೋಜನೆ ಅನುಷ್ಠಾನ ಕಾರ್ಯಸಾಧುವಲ್ಲ ಎಂದು ಸಮೀಕ್ಷೆ ವರದಿ ತಿಳಿಸಿತ್ತು. ಹೀಗಾಗಿ, ಯೋಜನೆ ಕೈಗೆತ್ತಿಕೊಂಡಿರಲಿಲ್ಲ’ ಎಂದರು. </p>.<p>236 ಕಿ.ಮೀ ಉದ್ದದ ಮಾರ್ಗದ ಈ ಯೋಜನೆಯು ಕರ್ನಾಟಕ, ತಮಿಳುನಾಡು ಹಾಗೂ ಕೇರಳವನ್ನು ಸಂಪರ್ಕಿಸುತ್ತದೆ. ಕರ್ನಾಟಕದ ಬಂಡೀಪುರ, ತಮಿಳುನಾಡಿನ ಮುಧುಮಲೆ ಹಾಗೂ ಕೇರಳದ ವಯನಾಡ್ ಸಂರಕ್ಷಿತ ಅರಣ್ಯ ಪ್ರದೇಶದ ಮೂಲಕ ಈ ಮಾರ್ಗ ಹಾದು ಹೋಗುತ್ತದೆ. ಹಾಗಾಗಿ, ಈ ಯೋಜನೆಗೆ ಕರ್ನಾಟಕ ಸರ್ಕಾರ ವಿರೋಧ ವ್ಯಕ್ತಪಡಿಸಿದೆ.</p>.<p><strong>ಬ್ರಾಡ್ಗೇಜ್ ಮಾರ್ಗಕ್ಕೆ ಡಿಪಿಆರ್</strong></p>.<p>ಬಳ್ಳಾರಿ ಸಂಸದ ಇ.ತುಕಾರಾಂ ಪ್ರಶ್ನೆಗೆ ಉತ್ತರ ನೀಡಿರುವ ಅಶ್ವಿನಿ ವೈಷ್ಣವ್, ‘ಬಳ್ಳಾರಿಯ ಸ್ವಾಮಿಹಳ್ಳಿ ಹಾಗೂ ಆಂಧ್ರ ಪ್ರದೇಶದ ರಾಯದುರ್ಗ ನಡುವೆ ಬ್ರಾಡ್ಗೇಜ್ ರೈಲು ಮಾರ್ಗ ನಿರ್ಮಾಣಕ್ಕೆ ಅಂತಿಮ ಸ್ಥಳ ಸಮೀಕ್ಷೆ ನಡೆಸಲಾಗಿದ್ದು, ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲಾಗುವುದು’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>