ಪ್ರತಿನಿಧಿಗಳು, ಹುತಾತ್ಮರ ಗೌರವಾರ್ಥ ದೆಹಲಿಯ ಕರ್ತವ್ಯಪಥದಲ್ಲಿ ನಿರ್ಮಾಣವಾಗುವ ಅಮೃತ ಉದ್ಯಾನದ ಸ್ಥಳಕ್ಕೆ ನಮ್ಮ ರಾಜ್ಯದಿಂದ ಸಂಗ್ರಹಿಸಿದ ಮಣ್ಣಿನ ಅಮೃತ ಕಳಶವನ್ನು ಇದೇ 30 ರಂದು ತಲುಪಿಸುವರು. ರಾಜ್ಯದಲ್ಲಿ ಕಳೆದ ಎರಡು ತಿಂಗಳಿಂದ ‘ನನ್ನ ಮಣ್ಣು ನನ್ನ ದೇಶ’ ಅಭಿಯಾನ ನಡೆದಿದ್ದು, ಪ್ರತಿ ಮನೆ, ಧಾರ್ಮಿಕ ಕೇಂದ್ರಗಳು, ವೀರಯೋಧರ ಮನೆ, ಸ್ವಾತಂತ್ರ್ಯ ಹೋರಾಟಗಾರರ ಮನೆ, ಮಹಾಪುರುಷರ ಸ್ಮಾರಕ ಸ್ಥಳ ಸಾಧು ಸಂತರ ಮಠಗಳಿಗೆ ಪುಣ್ಯ ಮಣ್ಣನ್ನು ಸಂಗ್ರಹಿಸಲಾಗಿತ್ತು. ಅಮೃತವನದಲ್ಲಿ ಮಣ್ಣನ್ನು ವಿಲೀನಗೊಳಿಸಲಾಗುವುದು ಎಂದು ಮುಖಂಡರು ತಿಳಿಸಿದರು. ದೆಹಲಿಯಲ್ಲಿ ಇದೇ 31 ರಂದು ಒಂದು ಲಕ್ಷಕ್ಕೂ ಹೆಚ್ಚು ಯುವಕರು ಭಾಗವಹಿಸಲಿದ್ದಾರೆ.