<p><strong>ನವದೆಹಲಿ</strong>: ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಆಧಾರ್ ಕಾರ್ಡ್ ಜೋಡಣೆಯಾಗದ ಕಾರ್ಮಿಕರ ಜಾಬ್ ಕಾರ್ಡ್ಗಳನ್ನು ರದ್ದುಪಡಿಸಿಲ್ಲ ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಖಾತೆ ರಾಜ್ಯ ಸಚಿವ ಕಮಲೇಶ್ ಪಾಸ್ವಾನ್ ಸ್ಪಷ್ಟಪಡಿಸಿದರು. </p>.<p>ಲೋಕಸಭೆಯಲ್ಲಿ ರಾಯಚೂರು ಸಂಸದ ಜಿ.ಕುಮಾರ್ ನಾಯ್ಕ್ ಮಂಗಳವಾರ ಕೇಳಿದ ಪ್ರಶ್ನೆಗೆ ಉತ್ತರ ನೀಡಿರುವ ಸಚಿವರು, ‘ಈ ವರ್ಷದ ಜನವರಿಯಿಂದ ಕಾರ್ಮಿಕರಿಗೆ ವೇತನ ಪಾವತಿಗೆ ಆಧಾರ್ ಕಡ್ಡಾಯಗೊಳಿಸಲಾಗಿದೆ. ವ್ಯವಸ್ಥೆಯಲ್ಲಿ ಪಾರದರ್ಶಕತೆ ತರುವ ಉದ್ದೇಶ ಇದರ ಹಿಂದಿದೆ’ ಎಂದರು. </p>.<p>‘ದೇಶದಲ್ಲಿ 2024–25ನೇ ಆರ್ಥಿಕ ವರ್ಷದಲ್ಲಿ 35.04 ಲಕ್ಷ ಜಾಬ್ ಕಾರ್ಡ್ಗಳನ್ನು ರದ್ದುಪಡಿಸಲಾಗಿದೆ. ನಕಲಿ ಜಾಬ್ ಕಾರ್ಡ್, ಗ್ರಾಮಸ್ಥರು ಕೆಲಸ ಮಾಡಲು ಇಷ್ಟ ಪಡದೇ ಇರುವುದು, ಕುಟುಂಬದವರು ಗ್ರಾಮದಿಂದ ಶಾಶ್ವತವಾಗಿ ಸ್ಥಳಾಂತರ ಆಗಿರುವುದು ಇದಕ್ಕೆ ಕಾರಣ. ಈ ವರ್ಷದಲ್ಲಿ ಹೊಸದಾಗಿ 36.21 ಲಕ್ಷ ಜಾಬ್ ಕಾರ್ಡ್ಗಳನ್ನು ವಿತರಿಸಲಾಗಿದೆ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಆಧಾರ್ ಕಾರ್ಡ್ ಜೋಡಣೆಯಾಗದ ಕಾರ್ಮಿಕರ ಜಾಬ್ ಕಾರ್ಡ್ಗಳನ್ನು ರದ್ದುಪಡಿಸಿಲ್ಲ ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಖಾತೆ ರಾಜ್ಯ ಸಚಿವ ಕಮಲೇಶ್ ಪಾಸ್ವಾನ್ ಸ್ಪಷ್ಟಪಡಿಸಿದರು. </p>.<p>ಲೋಕಸಭೆಯಲ್ಲಿ ರಾಯಚೂರು ಸಂಸದ ಜಿ.ಕುಮಾರ್ ನಾಯ್ಕ್ ಮಂಗಳವಾರ ಕೇಳಿದ ಪ್ರಶ್ನೆಗೆ ಉತ್ತರ ನೀಡಿರುವ ಸಚಿವರು, ‘ಈ ವರ್ಷದ ಜನವರಿಯಿಂದ ಕಾರ್ಮಿಕರಿಗೆ ವೇತನ ಪಾವತಿಗೆ ಆಧಾರ್ ಕಡ್ಡಾಯಗೊಳಿಸಲಾಗಿದೆ. ವ್ಯವಸ್ಥೆಯಲ್ಲಿ ಪಾರದರ್ಶಕತೆ ತರುವ ಉದ್ದೇಶ ಇದರ ಹಿಂದಿದೆ’ ಎಂದರು. </p>.<p>‘ದೇಶದಲ್ಲಿ 2024–25ನೇ ಆರ್ಥಿಕ ವರ್ಷದಲ್ಲಿ 35.04 ಲಕ್ಷ ಜಾಬ್ ಕಾರ್ಡ್ಗಳನ್ನು ರದ್ದುಪಡಿಸಲಾಗಿದೆ. ನಕಲಿ ಜಾಬ್ ಕಾರ್ಡ್, ಗ್ರಾಮಸ್ಥರು ಕೆಲಸ ಮಾಡಲು ಇಷ್ಟ ಪಡದೇ ಇರುವುದು, ಕುಟುಂಬದವರು ಗ್ರಾಮದಿಂದ ಶಾಶ್ವತವಾಗಿ ಸ್ಥಳಾಂತರ ಆಗಿರುವುದು ಇದಕ್ಕೆ ಕಾರಣ. ಈ ವರ್ಷದಲ್ಲಿ ಹೊಸದಾಗಿ 36.21 ಲಕ್ಷ ಜಾಬ್ ಕಾರ್ಡ್ಗಳನ್ನು ವಿತರಿಸಲಾಗಿದೆ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>