ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಇದೇ 20 ಮತ್ತು 21 ರಂದು ರಾಜ್ಯದಲ್ಲಿ ಎರಡು ದಿನಗಳ ಪ್ರವಾಸ ಹಮ್ಮಿಕೊಂಡಿದ್ದು, ಈ ಸಂಬಂಧ ತಯಾರಿ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಿದರು.
ಮೈಸೂರಿನಲ್ಲಿ ವಿಶ್ವ ಯೋಗ ದಿನದ ಕಾರ್ಯಕ್ರಮದಲ್ಲಿ ಮೋದಿ ಭಾಗವಹಿಸಲಿದ್ದಾರೆ. ಅಲ್ಲದೆ, ವಿವಿಧ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದು, ಈ ಕಾರ್ಯಕ್ರಮಗಳ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದರು.