<p><strong>ಬೆಂಗಳೂರು</strong>: ‘23 ವರ್ಷಗಳ ನಂತರ ಕರ್ನಾಟಕದಲ್ಲಿ ಅಖಿಲ ಭಾರತ ಸಭಾಧ್ಯಕ್ಷರ ಸಮಾವೇಶ ನಡೆಸುವ ಅವಕಾಶ ಒದಗಿಬಂದಿದೆ’ ಎಂದು ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್ ತಿಳಿಸಿದರು.</p>.<p>ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕರ್ನಾಟಕದಲ್ಲಿ ಸಭಾಧ್ಯಕ್ಷರ ಸಮಾವೇಶವನ್ನು ನಡೆಸಲು ಅವಕಾಶ ನೀಡಿ ಎಂದು ಲೋಕಸಭಾ ಸ್ಪೀಕರ್ಗೆ ಹಲವು ಬಾರಿ ಪತ್ರ ಬರೆದಿದ್ದೆವು. ಅವರು ಈಗ ಅನುಮತಿ ನೀಡಿದ್ದಾರೆ’ ಎಂದರು.</p>.<p>‘ಲೋಕಸಭಾ ಸ್ಪೀಕರ್ ಮತ್ತು ಡೆಪ್ಯುಟಿ ಸ್ಪೀಕರ್, ಎಲ್ಲ ರಾಜ್ಯಗಳ ವಿಧಾನ ಸಭಾಧ್ಯಕ್ಷರು, ಉಪ ಸಭಾಧ್ಯಕ್ಷರು, ಕಾರ್ಯದರ್ಶಿಗಳು ಸೇರಿ 500ಕ್ಕೂ ಹೆಚ್ಚು ಮಂದಿ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ’ ಎಂದರು.</p>.<p>‘ಬೆಂಗಳೂರಿನಲ್ಲೇ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ. ಸ್ಥಳ ಇನ್ನಷ್ಟೇ ನಿಗದಿ ಆಗಬೇಕು. ಸೆಪ್ಟೆಂಬರ್ 8ರಿಂದ 11ರವರೆಗೆ ನಾಲ್ಕು ದಿನ ಸಮಾವೇಶ ನಡೆಯಲಿದೆ. 8ರಂದು ಎಲ್ಲ ಪ್ರತಿನಿಧಿಗಳು ಇಲ್ಲಿಗೆ ಬರಲಿದ್ದಾರೆ. 9 ಮತ್ತು 10ರಂದು ವೇದಿಕೆ ಕಾರ್ಯಕ್ರಮಗಳು ನಡೆಯಲಿವೆ. 11ರಂದು ಪ್ರತಿನಿಧಿಗಳನ್ನು ಪ್ರೇಕ್ಷಣೀಯ ಸ್ಥಳಕ್ಕೆ ಕರೆದೊಯ್ಯಲು ನಿರ್ಧರಿಸಲಾಗಿದೆ’ ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘23 ವರ್ಷಗಳ ನಂತರ ಕರ್ನಾಟಕದಲ್ಲಿ ಅಖಿಲ ಭಾರತ ಸಭಾಧ್ಯಕ್ಷರ ಸಮಾವೇಶ ನಡೆಸುವ ಅವಕಾಶ ಒದಗಿಬಂದಿದೆ’ ಎಂದು ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್ ತಿಳಿಸಿದರು.</p>.<p>ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕರ್ನಾಟಕದಲ್ಲಿ ಸಭಾಧ್ಯಕ್ಷರ ಸಮಾವೇಶವನ್ನು ನಡೆಸಲು ಅವಕಾಶ ನೀಡಿ ಎಂದು ಲೋಕಸಭಾ ಸ್ಪೀಕರ್ಗೆ ಹಲವು ಬಾರಿ ಪತ್ರ ಬರೆದಿದ್ದೆವು. ಅವರು ಈಗ ಅನುಮತಿ ನೀಡಿದ್ದಾರೆ’ ಎಂದರು.</p>.<p>‘ಲೋಕಸಭಾ ಸ್ಪೀಕರ್ ಮತ್ತು ಡೆಪ್ಯುಟಿ ಸ್ಪೀಕರ್, ಎಲ್ಲ ರಾಜ್ಯಗಳ ವಿಧಾನ ಸಭಾಧ್ಯಕ್ಷರು, ಉಪ ಸಭಾಧ್ಯಕ್ಷರು, ಕಾರ್ಯದರ್ಶಿಗಳು ಸೇರಿ 500ಕ್ಕೂ ಹೆಚ್ಚು ಮಂದಿ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ’ ಎಂದರು.</p>.<p>‘ಬೆಂಗಳೂರಿನಲ್ಲೇ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ. ಸ್ಥಳ ಇನ್ನಷ್ಟೇ ನಿಗದಿ ಆಗಬೇಕು. ಸೆಪ್ಟೆಂಬರ್ 8ರಿಂದ 11ರವರೆಗೆ ನಾಲ್ಕು ದಿನ ಸಮಾವೇಶ ನಡೆಯಲಿದೆ. 8ರಂದು ಎಲ್ಲ ಪ್ರತಿನಿಧಿಗಳು ಇಲ್ಲಿಗೆ ಬರಲಿದ್ದಾರೆ. 9 ಮತ್ತು 10ರಂದು ವೇದಿಕೆ ಕಾರ್ಯಕ್ರಮಗಳು ನಡೆಯಲಿವೆ. 11ರಂದು ಪ್ರತಿನಿಧಿಗಳನ್ನು ಪ್ರೇಕ್ಷಣೀಯ ಸ್ಥಳಕ್ಕೆ ಕರೆದೊಯ್ಯಲು ನಿರ್ಧರಿಸಲಾಗಿದೆ’ ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>