ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಬೆಂಗಳೂರು ಮೆಟ್ರೊ ರೈಲು ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ನೋಟಿಸ್ ಜಾರಿ ಮಾಡಿರುವ ಆಯೋಗವು ನಾಲ್ಕು ವಾರಗಳಲ್ಲಿ ವರದಿ ಸಲ್ಲಿಸುವಂತೆ ಸೂಚಿಸಿದೆ. ಈ ಘಟನೆಗೆ ಸಂಬಂಧಿಸಿದ ಕೈಗೊಂಡ ಕ್ರಮಗಳ ಹಾಗೂ ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕೈಗೊಂಡ ಉಪಕ್ರಮಗಳ ವಿವರ ವರದಿಯಲ್ಲಿರಬೇಕು ಎಂದೂ ಆಯೋಗ ತಿಳಿಸಿದೆ.
ರಾಜಾಜಿನಗರ ಮೆಟ್ರೊ ನಿಲ್ದಾಣದಲ್ಲಿ ಫೆ.18ರಂದು ನಡೆದಿರುವ ಘಟನೆಯನ್ನು ಮೊಬೈಲ್ನಲ್ಲಿ ಚಿತ್ರೀಕರಿಸಿರುವ ಕಾರ್ತಿಕ್ ಐರಾನಿ ಎಂಬುವವರು ಸಾಮಾಜಿಕ ಮಾಧ್ಯಮಗಳಲ್ಲಿ ಅಪ್ಲೋಡ್ ಮಾಡಿದ್ದರು.