<p><strong>ಹುಬ್ಬಳ್ಳಿ</strong>: ಶತಮಾನಗಳ ಇತಿಹಾಸವುಳ್ಳ ಮತ್ತು ಭೌಗೋಳಿಕ ಮಾನ್ಯತೆ (ಜಿಐ) ಪಡೆದಿರುವ ಧಾರವಾಡ ಜಿಲ್ಲೆ ನವಲಗುಂದದ ಧುರಿಗಳ (ಜಮಖಾನ) ಉತ್ಪಾದನೆಗೆ ತಯಾರಕರ ಕೊರತೆ ಕಾಡುತ್ತಿದೆ.</p>.<p>ನವಲಗುಂದದ ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದ (ಕಾವೇರಿ ಎಂಪೋರಿಯಂ) ಘಟಕದಲ್ಲಷ್ಟೇ ಸದ್ಯ ಜಮಖಾನಗಳ ಉತ್ಪಾದನೆ ಆಗುತ್ತಿದೆ. ಇವುಗಳ ಉತ್ಪಾದನೆ ಮಾಡುವವರ ಸಂಖ್ಯೆ 17ಕ್ಕೆ ಇಳಿದಿದೆ.</p>.<p>‘ಪಾರಂಪರಿಕ ನೇಯ್ಗೆ ಕಲೆಯನ್ನು ಮಕ್ತುಲ್ ಸಾಬ್ ಜಮಖಾನ್ದಾರ್ ಅವರು ನಮಗೆ ಕಲಿಸಿದರು. ನಾನು ತರಬೇತಿ ಪಡೆದಾಗ 150ಕ್ಕೂ ಹೆಚ್ಚು ಮಂದಿ ಕಾರ್ಮಿಕರು ತಯಾರಿಸುತ್ತಿದ್ದರು. ಕ್ರಮೇಣ ಅವರ ಸಂಖ್ಯೆ ಕುಸಿಯುತೊಡಗಿತು’ ಎಂದು ನವಲಗುಂದ ನೇಕಾರರ ಸಂಘದ ಅಧ್ಯಕ್ಷೆ ಫರ್ಜಾನ ಶಿರಸಂಗಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಜಮಖಾನ ತಯಾರಿಸುವವರಿಗೆ ಸರ್ಕಾರದಿಂದ ವಿಶೇಷ ನೆರವು ಇಲ್ಲ. ಜಮಖಾನ ಮಾರಾಟದಿಂದ ತಿಂಗಳಿಗೆ ₹2 ಲಕ್ಷದವರೆಗೆ ಆದಾಯಗಳಿಸುವ ಸಾಧ್ಯತೆ ಇದ್ದರೂ, ತಯಾರಕರ ಕೊರತೆಯಿಂದ ಅದು ಸಾಧ್ಯವಾಗುತ್ತಿಲ್ಲ. ಒಂದೊಂದು ಜಮಖಾನ ದರ ₹ 1 ಸಾವಿರದಿಂದ ₹ 10 ಸಾವಿರದವರೆಗೆ ಇರುತ್ತದೆ. ಸದ್ಯ ತಿಂಗಳಿಗೆ 100 ರಿಂದ 200 ಜಮಖಾನ ತಯಾರಿಸಲಾಗುತ್ತಿದೆ’ ಎಂದರು. </p>.<p>ಉತ್ತಮ ಬೇಡಿಕೆ: ‘ಪ್ರಾಚೀನ ಕಾಲದ ಕರಕುಶಲ ಉತ್ಪನ್ನವಾದ ಜಮಖಾನದ ಚಾರ್ಮೂರ್, ಪಗಡೆ ವಿಧಕ್ಕೆ ಸಾಕಷ್ಟು ಬೇಡಿಕೆ ಇದೆ. ನವಲಗುಂದದಲ್ಲಿರುವ ಘಟಕಕ್ಕೆ ಸೌಲಭ್ಯ ನೀಡಲಾಗಿದೆ. ಉತ್ಪನ್ನವಾರು ತಯಾರಕರಿಗೆ ಸಂಬಳ ನೀಡಲಾಗುತ್ತಿದೆ’ ಎಂದು ಘಟಕದ ಯೋಜನಾಧಿಕಾರಿ ರಮೇಶ ತಿಳಿಸಿದರು. </p>.<p>ವಿಜಯಪುರದಿಂದ ವಲಸೆ ಬಂದ ಕುಶಲಕರ್ಮಿಗಳು ಮುಸ್ಲಿಂ ಮಹಿಳೆಯರಿಂದ ಕಲೆ ಮುಂದುವರಿಕೆ </p>.<div><blockquote>2016ರಲ್ಲಿ 30 ಜನರಿಗೆ ತರಬೇತಿ ನೀಡಲಾಗಿತ್ತು. ಹೊಸದಾಗಿ ತರಬೇತಿ ನೀಡಲು ಸರ್ಕಾರ ಅನುಮೋದನೆ ನೀಡಿದ ಬಳಿಕ ತರಬೇತಿ ಆರಂಭಿಸಲಾಗುತ್ತದೆ</blockquote><span class="attribution">ರಮೇಶ, ಯೋಜನಾಧಿಕಾರಿ, ನವಲಗುಂದ ಜಮಖಾನ ಉತ್ಪಾದನಾ ಘಟಕ</span></div>.<div><blockquote>ನವಲಗುಂದ ಜಮಖಾನ ಅಭಿವೃದ್ಧಿಗೆ ಪ್ರತ್ಯೇಕ ಯೋಜನೆ ಇಲ್ಲ. ಶೀಘ್ರದಲ್ಲೇ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸುವೆ. ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು.</blockquote><span class="attribution">ಎಚ್.ಬಿ. ಪಾಟೀಲ, ಕೈಮಗ್ಗ ಮತ್ತು ಜವಳಿ ಇಲಾಖೆ ಧಾರವಾಡ </span></div>.<p><strong>‘ಪರಂಪರೆಯೂ ಕಾರಣ’</strong></p><p>‘ಜಮಖಾನ ಉತ್ಪಾದನೆ ಮಾರಾಟದ ಹೊಣೆಯನ್ನು ಸರ್ಕಾರ ವಹಿಸಿಕೊಂಡಿದೆ. ಹೊಸದಾಗಿ ತರಬೇತಿ ಪಡೆದವರು ಆ ಕೆಲಸ ಮುಂದುವರಿಸುವುದಿಲ್ಲ. ಮುಖ್ಯವಾಗಿ ಕೌಶಲ ಗೊತ್ತಿರುವವರು ಮನೆಯ ಹೆಣ್ಣುಮಕ್ಕಳಿಗೆ ಕಲಿಸುವುದಿಲ್ಲ. ಹೊಸ ಪೀಳಿಗೆ ಅವರಿಗೆ ಈ ಬಗ್ಗೆ ಆಸಕ್ತಿ ಇಲ್ಲ. ತಯಾರಕದ ಸಂಖ್ಯೆ ಕುಸಿಯಲು ಇದೂ ಕಾರಣ’ ಎಂದು ಕೈಮಗ್ಗ ಹಾಗೂ ಜವಳಿ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ಶತಮಾನಗಳ ಇತಿಹಾಸವುಳ್ಳ ಮತ್ತು ಭೌಗೋಳಿಕ ಮಾನ್ಯತೆ (ಜಿಐ) ಪಡೆದಿರುವ ಧಾರವಾಡ ಜಿಲ್ಲೆ ನವಲಗುಂದದ ಧುರಿಗಳ (ಜಮಖಾನ) ಉತ್ಪಾದನೆಗೆ ತಯಾರಕರ ಕೊರತೆ ಕಾಡುತ್ತಿದೆ.</p>.<p>ನವಲಗುಂದದ ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದ (ಕಾವೇರಿ ಎಂಪೋರಿಯಂ) ಘಟಕದಲ್ಲಷ್ಟೇ ಸದ್ಯ ಜಮಖಾನಗಳ ಉತ್ಪಾದನೆ ಆಗುತ್ತಿದೆ. ಇವುಗಳ ಉತ್ಪಾದನೆ ಮಾಡುವವರ ಸಂಖ್ಯೆ 17ಕ್ಕೆ ಇಳಿದಿದೆ.</p>.<p>‘ಪಾರಂಪರಿಕ ನೇಯ್ಗೆ ಕಲೆಯನ್ನು ಮಕ್ತುಲ್ ಸಾಬ್ ಜಮಖಾನ್ದಾರ್ ಅವರು ನಮಗೆ ಕಲಿಸಿದರು. ನಾನು ತರಬೇತಿ ಪಡೆದಾಗ 150ಕ್ಕೂ ಹೆಚ್ಚು ಮಂದಿ ಕಾರ್ಮಿಕರು ತಯಾರಿಸುತ್ತಿದ್ದರು. ಕ್ರಮೇಣ ಅವರ ಸಂಖ್ಯೆ ಕುಸಿಯುತೊಡಗಿತು’ ಎಂದು ನವಲಗುಂದ ನೇಕಾರರ ಸಂಘದ ಅಧ್ಯಕ್ಷೆ ಫರ್ಜಾನ ಶಿರಸಂಗಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಜಮಖಾನ ತಯಾರಿಸುವವರಿಗೆ ಸರ್ಕಾರದಿಂದ ವಿಶೇಷ ನೆರವು ಇಲ್ಲ. ಜಮಖಾನ ಮಾರಾಟದಿಂದ ತಿಂಗಳಿಗೆ ₹2 ಲಕ್ಷದವರೆಗೆ ಆದಾಯಗಳಿಸುವ ಸಾಧ್ಯತೆ ಇದ್ದರೂ, ತಯಾರಕರ ಕೊರತೆಯಿಂದ ಅದು ಸಾಧ್ಯವಾಗುತ್ತಿಲ್ಲ. ಒಂದೊಂದು ಜಮಖಾನ ದರ ₹ 1 ಸಾವಿರದಿಂದ ₹ 10 ಸಾವಿರದವರೆಗೆ ಇರುತ್ತದೆ. ಸದ್ಯ ತಿಂಗಳಿಗೆ 100 ರಿಂದ 200 ಜಮಖಾನ ತಯಾರಿಸಲಾಗುತ್ತಿದೆ’ ಎಂದರು. </p>.<p>ಉತ್ತಮ ಬೇಡಿಕೆ: ‘ಪ್ರಾಚೀನ ಕಾಲದ ಕರಕುಶಲ ಉತ್ಪನ್ನವಾದ ಜಮಖಾನದ ಚಾರ್ಮೂರ್, ಪಗಡೆ ವಿಧಕ್ಕೆ ಸಾಕಷ್ಟು ಬೇಡಿಕೆ ಇದೆ. ನವಲಗುಂದದಲ್ಲಿರುವ ಘಟಕಕ್ಕೆ ಸೌಲಭ್ಯ ನೀಡಲಾಗಿದೆ. ಉತ್ಪನ್ನವಾರು ತಯಾರಕರಿಗೆ ಸಂಬಳ ನೀಡಲಾಗುತ್ತಿದೆ’ ಎಂದು ಘಟಕದ ಯೋಜನಾಧಿಕಾರಿ ರಮೇಶ ತಿಳಿಸಿದರು. </p>.<p>ವಿಜಯಪುರದಿಂದ ವಲಸೆ ಬಂದ ಕುಶಲಕರ್ಮಿಗಳು ಮುಸ್ಲಿಂ ಮಹಿಳೆಯರಿಂದ ಕಲೆ ಮುಂದುವರಿಕೆ </p>.<div><blockquote>2016ರಲ್ಲಿ 30 ಜನರಿಗೆ ತರಬೇತಿ ನೀಡಲಾಗಿತ್ತು. ಹೊಸದಾಗಿ ತರಬೇತಿ ನೀಡಲು ಸರ್ಕಾರ ಅನುಮೋದನೆ ನೀಡಿದ ಬಳಿಕ ತರಬೇತಿ ಆರಂಭಿಸಲಾಗುತ್ತದೆ</blockquote><span class="attribution">ರಮೇಶ, ಯೋಜನಾಧಿಕಾರಿ, ನವಲಗುಂದ ಜಮಖಾನ ಉತ್ಪಾದನಾ ಘಟಕ</span></div>.<div><blockquote>ನವಲಗುಂದ ಜಮಖಾನ ಅಭಿವೃದ್ಧಿಗೆ ಪ್ರತ್ಯೇಕ ಯೋಜನೆ ಇಲ್ಲ. ಶೀಘ್ರದಲ್ಲೇ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸುವೆ. ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು.</blockquote><span class="attribution">ಎಚ್.ಬಿ. ಪಾಟೀಲ, ಕೈಮಗ್ಗ ಮತ್ತು ಜವಳಿ ಇಲಾಖೆ ಧಾರವಾಡ </span></div>.<p><strong>‘ಪರಂಪರೆಯೂ ಕಾರಣ’</strong></p><p>‘ಜಮಖಾನ ಉತ್ಪಾದನೆ ಮಾರಾಟದ ಹೊಣೆಯನ್ನು ಸರ್ಕಾರ ವಹಿಸಿಕೊಂಡಿದೆ. ಹೊಸದಾಗಿ ತರಬೇತಿ ಪಡೆದವರು ಆ ಕೆಲಸ ಮುಂದುವರಿಸುವುದಿಲ್ಲ. ಮುಖ್ಯವಾಗಿ ಕೌಶಲ ಗೊತ್ತಿರುವವರು ಮನೆಯ ಹೆಣ್ಣುಮಕ್ಕಳಿಗೆ ಕಲಿಸುವುದಿಲ್ಲ. ಹೊಸ ಪೀಳಿಗೆ ಅವರಿಗೆ ಈ ಬಗ್ಗೆ ಆಸಕ್ತಿ ಇಲ್ಲ. ತಯಾರಕದ ಸಂಖ್ಯೆ ಕುಸಿಯಲು ಇದೂ ಕಾರಣ’ ಎಂದು ಕೈಮಗ್ಗ ಹಾಗೂ ಜವಳಿ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>