ಮಂಗಳೂರು: ಕೋಮುಹಿಂಸೆಯ ಸಂತ್ರಸ್ತರಿಗೆ ರಕ್ಷಣೆ, ಪರಿಹಾರ, ಪುನರ್ವಸತಿ ಖಾತರಿ ಪಡಿಸುವ ಕಾನೂನು ರೂಪಿಸಬೇಕು ಹಾಗೂ ಮುಸ್ಲಿಂ ಅಲ್ಪಸಂಖ್ಯಾತರ ಶಿಕ್ಷಣ, ವಸತಿ, ಸಾಮಾಜಿಕ ಕಲ್ಯಾಣ ಕಾರ್ಯಕ್ರಮಗಳಿಗೆ ಅವರ ಜನಸಂಖ್ಯೆ ಪ್ರಮಾಣಕ್ಕೆ ಅನುಗುಣವಾಗಿ ಬಜೆಟ್ನಲ್ಲಿ ಸರ್ಕಾರ ಅನುದಾನ ಮೀಸಲಿಡಬೇಕು ಎಂದು ಮುಸ್ಲಿಂ ಸಮಾವೇಶದಲ್ಲಿ ನಿರ್ಣಯ ಅಂಗೀಕರಿಸಲಾಗಿದೆ.