ವಿಧಾನಸಭೆಯಲ್ಲಿ ಕಾಂಗ್ರೆಸ್ನ ಕೃಷ್ಣ ಬೈರೇಗೌಡ ಅವರ ಪ್ರಶ್ನೆಗೆ ಮಂಗಳವಾರ ಉತ್ತರಿಸಿದ ಅವರು, ‘ನಗರದಲ್ಲಿನ ರಾಜಕಾಲುವೆಗಳ ಸುಧಾರಣಾ ಕಾಮಗಾರಿಗಳಿಗಾಗಿ ₹ 1,500 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಟೆಂಡರ್ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. ರಾಜಕಾಲುವೆಗಳನ್ನು ಅತಿಕ್ರಮಣ ಮಾಡಿ ನಿರ್ಮಿಸಿರುವ ಕಟ್ಟಡಗಳನ್ನು ತೆರವುಗೊಳಿಸಿದ ಬಳಿಕವೇ ಕಾಮಗಾರಿಗಳನ್ನು ಆರಂಭಿಸಬೇಕಿದೆ’ ಎಂದರು.