ಚಿಕ್ಕಮಗಳೂರು: ‘ಮತಾಂತರ ನಿಷೇಧ ಕಾಯ್ದೆ ಹಿಂದಕ್ಕೆ ಪಡೆದಿರುವುದರಿಂದ ದೇಶ ಮತ್ತು ಹಿಂದೂ ಧರ್ಮ ಉಳಿಸಿಕೊಳ್ಳಲು ಎಲ್ಲಾ ಸಮುದಾಯದ ಮಠಾಧೀಶರು ಮಹಾ ಪಂಚಾಯತ್ ಕರೆಯಬೇಕು. ಸಾಮ, ದಾನ, ಭೇದ, ದಂಡ ಬಳಸಿ ಮರು ಮತಾಂತರಕ್ಕೆ ಮುಂದಾಗುವ ಅನಿವಾರ್ಯತೆ ಇದೆ’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರತಿಪಾದಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಲವಂತದ ಮತ್ತು ಆಮಿಷದ ಮತಾಂತರದ ವಿರುದ್ಧ ಇದ್ದ ಕಾಯ್ದೆಯನ್ನು ಈಗ ಕಾಂಗ್ರೆಸ್ ಹಿಂಪಡೆದಿದೆ. ಆ ಮೂಲಕ ಬಲವಂತದ ಮತಾಂತರದ ಪರವಾಗಿದೆ ಎಂಬುದನ್ನು ತೋರ್ಪಡಿಸಿದೆ’ ಎಂದರು.