ಮಸೂದೆ ಕುರಿತು ಮಾತನಾಡಿದ ಜೆಡಿಎಸ್ನ ಕೆ.ಎ. ತಿಪ್ಪೇಸ್ವಾಮಿ, ರಮೇಶ್ ಗೌಡ, ಕೆ.ಟಿ. ಶ್ರೀಕಂಠೇಗೌಡ, ಎಸ್.ಎಲ್. ಭೋಜೇಗೌಡ, ಮರಿತಿಬ್ಬೇಗೌಡ ಮತ್ತು ಕಾಂಗ್ರೆಸ್ನ ಎಸ್. ರವಿ, ಯು.ಬಿ. ವೆಂಕಟೇಶ್, ಪಿ.ಆರ್. ರಮೇಶ್ ಅವರು, ‘ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಂದೂಡುವ ದುರುದ್ದೇಶದಿಂದಲೇ ಈ ಮಸೂದೆಗೆ ತಿದ್ದುಪಡಿ ಮಾಡಲಾಗುತ್ತಿದೆ. ತಾಲ್ಲೂಕು ಪಂಚಾಯಿತಿಗಳು ಸಂಪೂರ್ಣ ನಿಷ್ಕ್ರಿಯವಾಗಿವೆ. ಕೇವಲ ಹೆಸರಿಗೆ ಉಳಿದಿವೆ. ಲೆಕ್ಕಕ್ಕಿಲ್ಲದಂತಿರುವ ತಾಲ್ಲೂಕು ಪಂಚಾಯಿತಿಗಳನ್ನು ಮುಚ್ಚಿ ಇಲ್ಲವೇ ಬಲ ತುಂಬಿ’ ಎಂದು ಪ್ರತಿಪಾದಿಸಿದರು.