<p><strong>ಬೆಂಗಳೂರು</strong>: ನೀಟ್ ಸ್ನಾತಕೋತ್ತರ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಪ್ರವೇಶಕ್ಕೆ ನೋಂದಾಯಿಸಿ, ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಿರುವ ಅಭ್ಯರ್ಥಿಗಳು ಜುಲೈ 31ರ ಬೆಳಿಗ್ಗೆ 11 ಗಂಟೆಯಿಂದ ಆಗಸ್ಟ್ 1ರ ಮಧ್ಯಾಹ್ನ 11.59ರವರೆಗೆ ಅರ್ಹತೆಗೆ ಅನುಗುಣವಾಗಿ ಅರ್ಜಿಯಲ್ಲಿನ ಮಾಹಿತಿಗಳನ್ನು ತಿದ್ದುಪಡಿ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ.</p>.<p>ನೀಟ್ ಅರ್ಜಿಯಲ್ಲಿ ಘೋಷಿಸಿರುವ, ಆದರೆ ಇನ್ನೂ ಶುಲ್ಕ ಪಾವತಿ ಮಾಡದಿರುವ ಅಭ್ಯರ್ಥಿಗಳು ನಿಗದಿತ ಶುಲ್ಕವನ್ನು ಪಾವತಿಸಿ ನಂತರ ತಿದ್ದುಪಡಿ ಮಾಡಿಕೊಳ್ಳಬಹುದು. ಈ ಬಗ್ಗೆ ಅಭ್ಯರ್ಥಿಗಳಿಗೆ ವೈಯಕ್ತಿಕವಾಗಿ ಮಾಹಿತಿ ಕಳುಹಿಸಲಾಗುವುದಿಲ್ಲ’ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ತಿಳಿಸಿದ್ದಾರೆ.</p>.<p>ಆಗಸ್ಟ್ 1ರಂದು ಕನ್ನಡ ಭಾಷೆ ಪರೀಕ್ಷೆ: ಜುಲೈ 26 ಮತ್ತು 28ರಂದು ನೀಟ್ ಅರ್ಜಿ ಸಲ್ಲಿಸಿದ ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಆಗಸ್ಟ್ 1ರಂದು ಮಧ್ಯಾಹ್ನ 3ರಿಂದ ರಿಂದ 4 ಗಂಟೆವರೆಗೆ ಕನ್ನಡ ಭಾಷಾ ಪರೀಕ್ಷೆ ನಡೆಸಲಾಗುವುದು.</p>.<p>ಜುಲೈ 25ರಂದು ನಡೆದ ಕನ್ನಡ ಭಾಷಾ ಪರೀಕ್ಷೆಗೆ ಹವಾಮಾನ ವೈಪರೀತ್ಯ, ಮಳೆಯ ಕಾರಣದಿಂದ ಗೈರುಹಾಜರಾಗಿದ್ದವರೂ ಆಗಸ್ಟ್ 1ರಂದು ನಡೆಯುವ ಕನ್ನಡ ಭಾಷಾ ಪರೀಕ್ಷೆಗೆ ಹಾಜರಾಗಬಹುದು. ಅರ್ಹ ಅಭ್ಯರ್ಥಿಗಳು ಪ್ರವೇಶ ಪತ್ರಗಳನ್ನು ಪ್ರಾಧಿಕಾರದ ವೆಬ್ಸೈಟಿನಿಂದ ಡೌನ್ಲೋಡ್ ಮಾಡಿಕೊಳ್ಳಬೇಕು. ಈ ಬಗ್ಗೆಯೂ ಅಭ್ಯರ್ಥಿಗಳಿಗೆ ವೈಯಕ್ತಿಕವಾಗಿ ಮಾಹಿತಿ ಕಳುಹಿಸಲಾಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನೀಟ್ ಸ್ನಾತಕೋತ್ತರ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಪ್ರವೇಶಕ್ಕೆ ನೋಂದಾಯಿಸಿ, ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಿರುವ ಅಭ್ಯರ್ಥಿಗಳು ಜುಲೈ 31ರ ಬೆಳಿಗ್ಗೆ 11 ಗಂಟೆಯಿಂದ ಆಗಸ್ಟ್ 1ರ ಮಧ್ಯಾಹ್ನ 11.59ರವರೆಗೆ ಅರ್ಹತೆಗೆ ಅನುಗುಣವಾಗಿ ಅರ್ಜಿಯಲ್ಲಿನ ಮಾಹಿತಿಗಳನ್ನು ತಿದ್ದುಪಡಿ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ.</p>.<p>ನೀಟ್ ಅರ್ಜಿಯಲ್ಲಿ ಘೋಷಿಸಿರುವ, ಆದರೆ ಇನ್ನೂ ಶುಲ್ಕ ಪಾವತಿ ಮಾಡದಿರುವ ಅಭ್ಯರ್ಥಿಗಳು ನಿಗದಿತ ಶುಲ್ಕವನ್ನು ಪಾವತಿಸಿ ನಂತರ ತಿದ್ದುಪಡಿ ಮಾಡಿಕೊಳ್ಳಬಹುದು. ಈ ಬಗ್ಗೆ ಅಭ್ಯರ್ಥಿಗಳಿಗೆ ವೈಯಕ್ತಿಕವಾಗಿ ಮಾಹಿತಿ ಕಳುಹಿಸಲಾಗುವುದಿಲ್ಲ’ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ತಿಳಿಸಿದ್ದಾರೆ.</p>.<p>ಆಗಸ್ಟ್ 1ರಂದು ಕನ್ನಡ ಭಾಷೆ ಪರೀಕ್ಷೆ: ಜುಲೈ 26 ಮತ್ತು 28ರಂದು ನೀಟ್ ಅರ್ಜಿ ಸಲ್ಲಿಸಿದ ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಆಗಸ್ಟ್ 1ರಂದು ಮಧ್ಯಾಹ್ನ 3ರಿಂದ ರಿಂದ 4 ಗಂಟೆವರೆಗೆ ಕನ್ನಡ ಭಾಷಾ ಪರೀಕ್ಷೆ ನಡೆಸಲಾಗುವುದು.</p>.<p>ಜುಲೈ 25ರಂದು ನಡೆದ ಕನ್ನಡ ಭಾಷಾ ಪರೀಕ್ಷೆಗೆ ಹವಾಮಾನ ವೈಪರೀತ್ಯ, ಮಳೆಯ ಕಾರಣದಿಂದ ಗೈರುಹಾಜರಾಗಿದ್ದವರೂ ಆಗಸ್ಟ್ 1ರಂದು ನಡೆಯುವ ಕನ್ನಡ ಭಾಷಾ ಪರೀಕ್ಷೆಗೆ ಹಾಜರಾಗಬಹುದು. ಅರ್ಹ ಅಭ್ಯರ್ಥಿಗಳು ಪ್ರವೇಶ ಪತ್ರಗಳನ್ನು ಪ್ರಾಧಿಕಾರದ ವೆಬ್ಸೈಟಿನಿಂದ ಡೌನ್ಲೋಡ್ ಮಾಡಿಕೊಳ್ಳಬೇಕು. ಈ ಬಗ್ಗೆಯೂ ಅಭ್ಯರ್ಥಿಗಳಿಗೆ ವೈಯಕ್ತಿಕವಾಗಿ ಮಾಹಿತಿ ಕಳುಹಿಸಲಾಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>