ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಬಿ.ಎಸ್. ಸೋಮಶೇಖರ್, ‘ನೇಕಾರ ಸಮುದಾಯ ರಾಜ್ಯದಲ್ಲಿ ಸುಮಾರು 60 ಲಕ್ಷ ಜನಸಂಖ್ಯೆ ಹೊಂದಿದ್ದು, ಸಾಮಾಜಿಕ, ರಾಜಕೀಯ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಹಿಂದುಳಿದಿದೆ. ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಿಗಮ ಸ್ಥಾಪಿಸಲಾಗಿತ್ತು. ಆದರೆ ನಿಗಮಕ್ಕೆ ಅನುದಾನ ನೀಡದ ಕಾರಣ, ಸಮುದಾಯದ ಅಭಿವೃದ್ಧಿ ಕುಂಠಿತಗೊಂಡಿದೆ’ ಎಂದು ದೂರಿದರು.