ಸೋಮವಾರ ತುಮಕೂರಿನ ಸಿದ್ದಗಂಗಾ ಮಠದಿಂದ ಆರಂಭವಾದ ಪಾದಯಾತ್ರೆ ರಾಷ್ಟ್ರೀಯ ಹೆದ್ದಾರಿ 48ರ ಮೂಲಕ 20 ಕಿ.ಮೀ. ಸಾಗಿ ರಾತ್ರಿ ದಾಬಸ್ ಪೇಟೆ ತಲುಪಿತು. ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದವರು ರಾತ್ರಿ ಪಟ್ಟಣದ ಬಸವಶ್ರೀ ಕಲ್ಯಾಣ ಮಂಟಪದಲ್ಲಿ ತಂಗಿದ್ದು, ಮಂಗಳವಾರ ಬೆಳಿಗ್ಗೆ ಇಲ್ಲಿಂದ ಬೆಂಗಳೂರಿನತ್ತ ಹೊರಟರು. ರಸ್ತೆಯುದ್ದಕ್ಕೂ ಭಿತ್ತಿಪತ್ರಗಳನ್ನು ಹಿಡಿದು ಸಾಗಿದರು.