<p><strong>ಕಠ್ಮಂಡು</strong>: ನೇಪಾಳದ ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಸಿಲುಕಿರುವ ಕನ್ನಡಿಗರೆಲ್ಲರೂ ಸುರಕ್ಷಿತರಾಗಿದ್ದಾರೆ ಎಂದು ಮುಖ್ಯಮಂತ್ರಿ ಕಾರ್ಯಾಲಯ ಎಕ್ಸ್ ಪೋಸ್ಟ್ನಲ್ಲಿ ತಿಳಿಸಿದೆ.</p><p>ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆಯ ಮೇರೆಗೆ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ದೆಹಲಿಯ ಕರ್ನಾಟಕ ಭವನದ ನಿವಾಸಿ ಆಯುಕ್ತರು ವಿವಿಧ ತಂಡಗಳಲ್ಲಿ ಇರುವ ಕನ್ನಡಿಗರ ಸಂಪರ್ಕದಲ್ಲಿದ್ದಾರೆ ಎಂದು ಪೋಸ್ಟ್ ತಿಳಿಸಿದೆ. </p><p>ರಾಜ್ಯ ಸರ್ಕಾರದ ಅಧಿಕಾರಿಗಳು ವಿದೇಶಾಂಗ ಇಲಾಖೆಯ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದು, ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದೆ.</p>. <p><strong>ಹಿನ್ನೆಲೆ</strong></p><p>ನೇಪಾಳದಲ್ಲಿ ಸಾಮಾಜಿಕ ಜಾಲತಾಣ ಗಳನ್ನು ನಿಷೇಧಿಸಿದ ಕ್ರಮ ವಿರೋಧಿಸಿ ಹಾಗೂ ಭ್ರಷ್ಟಾಚಾರ ತಡೆಯುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ದೇಶವ್ಯಾಪಿ ನಡೆಯುತ್ತಿರುವ ಪ್ರತಿಭಟನೆಗಳು ತೀವ್ರ ಸ್ವರೂಪ ಪಡೆದ ಬೆನ್ನಲ್ಲೇ ನೇಪಾಳ ಪ್ರಧಾನಿ ಕೆ.ಪಿ.ಶರ್ಮಾ ಓಲಿ ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.</p><p>ಕನ್ನಡಿಗರು ಸೇರಿದಂತೆ ಭಾರತದ ಹಲವು ಮಂದಿ ನೇಪಾಳದ ಕಠ್ಮಂಡು ವಿಮಾನ ನಿಲ್ದಾನದಲ್ಲಿ ಸಿಲುಕಿದ್ದಾರೆ.</p>.ಆಳ–ಅಗಲ | ನೇಪಾಳ: ಸರ್ಕಾರದ ಸದ್ದಡಗಿಸಿದ ‘ಯುವ ಕ್ರಾಂತಿ’.Nepal Gen Z Protest: ನೇಪಾಳ ನಿಗಿ ಕೆಂಡ, ಓಲಿ ತಲೆದಂಡ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಠ್ಮಂಡು</strong>: ನೇಪಾಳದ ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಸಿಲುಕಿರುವ ಕನ್ನಡಿಗರೆಲ್ಲರೂ ಸುರಕ್ಷಿತರಾಗಿದ್ದಾರೆ ಎಂದು ಮುಖ್ಯಮಂತ್ರಿ ಕಾರ್ಯಾಲಯ ಎಕ್ಸ್ ಪೋಸ್ಟ್ನಲ್ಲಿ ತಿಳಿಸಿದೆ.</p><p>ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆಯ ಮೇರೆಗೆ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ದೆಹಲಿಯ ಕರ್ನಾಟಕ ಭವನದ ನಿವಾಸಿ ಆಯುಕ್ತರು ವಿವಿಧ ತಂಡಗಳಲ್ಲಿ ಇರುವ ಕನ್ನಡಿಗರ ಸಂಪರ್ಕದಲ್ಲಿದ್ದಾರೆ ಎಂದು ಪೋಸ್ಟ್ ತಿಳಿಸಿದೆ. </p><p>ರಾಜ್ಯ ಸರ್ಕಾರದ ಅಧಿಕಾರಿಗಳು ವಿದೇಶಾಂಗ ಇಲಾಖೆಯ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದು, ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದೆ.</p>. <p><strong>ಹಿನ್ನೆಲೆ</strong></p><p>ನೇಪಾಳದಲ್ಲಿ ಸಾಮಾಜಿಕ ಜಾಲತಾಣ ಗಳನ್ನು ನಿಷೇಧಿಸಿದ ಕ್ರಮ ವಿರೋಧಿಸಿ ಹಾಗೂ ಭ್ರಷ್ಟಾಚಾರ ತಡೆಯುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ದೇಶವ್ಯಾಪಿ ನಡೆಯುತ್ತಿರುವ ಪ್ರತಿಭಟನೆಗಳು ತೀವ್ರ ಸ್ವರೂಪ ಪಡೆದ ಬೆನ್ನಲ್ಲೇ ನೇಪಾಳ ಪ್ರಧಾನಿ ಕೆ.ಪಿ.ಶರ್ಮಾ ಓಲಿ ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.</p><p>ಕನ್ನಡಿಗರು ಸೇರಿದಂತೆ ಭಾರತದ ಹಲವು ಮಂದಿ ನೇಪಾಳದ ಕಠ್ಮಂಡು ವಿಮಾನ ನಿಲ್ದಾನದಲ್ಲಿ ಸಿಲುಕಿದ್ದಾರೆ.</p>.ಆಳ–ಅಗಲ | ನೇಪಾಳ: ಸರ್ಕಾರದ ಸದ್ದಡಗಿಸಿದ ‘ಯುವ ಕ್ರಾಂತಿ’.Nepal Gen Z Protest: ನೇಪಾಳ ನಿಗಿ ಕೆಂಡ, ಓಲಿ ತಲೆದಂಡ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>