ವಿಜಯಪುರ: ರಾಜ್ಯ ಸರ್ಕಾರ ನೂತನ ಪ್ರವಾಸೋದ್ಯಮ ನೀತಿ ರೂಪಿಸುತ್ತಿದ್ದು, ಮುಂದಿನ ಎರಡು ತಿಂಗಳಲ್ಲಿ ಜಾರಿಗೆ ತರಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ ತಿಳಿಸಿದರು.
ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೂತನ ಪ್ರವಾಸೋದ್ಯಮ ನೀತಿಯಲ್ಲಿ ಶೈಕ್ಷಣಿಕ ಮತ್ತು ಕೃಷಿ ಪ್ರವಾಸ ಹಾಗೂ ಬಡ ಮಧ್ಯಮ ವರ್ಗದವರಿಗೆ ಬೇಸರ ಕಳೆಯಲು ವಾರಾಂತ್ಯ ಪ್ರವಾಸ ಏರ್ಪಡಿಸುವ ಬಗ್ಗೆ ಒತ್ತು ನೀಡಲಾಗುವುದು ಎಂದರು.
ಐತಿಹಾಸಿಕ ಸ್ಮಾರಕಗಳಿರುವ ವಿಜಯಪುರ ನಗರವನ್ನು ಯುನೆಸ್ಕೋ ವಿಶ್ವ ಪಾರಂಪರಿಕ ಸ್ಥಳವಾಗಿ (ವರ್ಲ್ಡ್ ಹೆರಿಟೇಜ್ ಸೈಟ್) ಮಾಡಲು ಉದ್ದೇಶಿಸಲಾಗಿದೆ ಎಂದು ಹೇಳಿದರು.