<p><strong>ಬೆಂಗಳೂರು: </strong>ಕುವೆಂಪು ವಿಶ್ವವಿದ್ಯಾಲಯವನ್ನು ವಿಭಜಿಸಿ ಚಿಕ್ಕಮಗಳೂರಿನಲ್ಲಿ ನೂತನ ವಿಶ್ವವಿದ್ಯಾಲಯ ಸ್ಥಾಪಿಸಲಾಗುತ್ತಿದೆ. ಆದರೆ, ನೂತನ ವಿಶ್ವವಿದ್ಯಾಲಯಕ್ಕೆ ಯಾವುದೇ ಹೆಚ್ಚುವರಿ ಅನುದಾನ ಘೋಷಿಸಿಲ್ಲ. </p>.<p>ಬೀದರ್, ಹಾವೇರಿ, ಚಾಮರಾಜನಗರ, ಬಾಗಲಕೋಟೆ, ಕೊಡಗು, ಕೊಪ್ಪಳ ಮತ್ತು ಹಾಸನ ಜಿಲ್ಲೆಗಳಲ್ಲಿ ಸ್ಥಾಪಿಸಿರುವ ವಿಶ್ವವಿದ್ಯಾಲಯಗಳ ಮಾದರಿಯಲ್ಲೇ ಚಿಕ್ಕಮಗಳೂರು ವಿಶ್ವವಿದ್ಯಾಲಯವನ್ನು ತಂತ್ರಜ್ಞಾನದ ಗರಿಷ್ಠ ಬಳಕೆಯೊಂದಿಗೆ, ಕಡಿಮೆ ಮಾನವ ಸಂಪನ್ಮೂಲ ಒಳಗೊಂಡಂತೆ ಸ್ಥಾಪಿಸಲು ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಲಾಗಿದೆ.</p>.<p>ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ಹೊಸ ಪಾಲಿಟೆಕ್ನಿಕ್ ಆರಂಭ, ಮುಖ್ಯಮಂತ್ರಿ ತವರು ಕ್ಷೇತ್ರ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲ್ಲೂಕಿನ ಬಂಕಾಪುರದಲ್ಲಿನ ಪಾಲಿಟೆಕ್ನಿಕ್ ಅನ್ನು ಸರ್ಕಾರಿ ಎಂಜಿನಿಯರಿಂಗ್ ಕಾಲೇಜಾಗಿ ಮೇಲ್ದರ್ಜೆಗೇರಿಸಲಾಗುತ್ತದೆ.</p>.<p>ವೃತ್ತಿಪರ ಕೋರ್ಸ್ಗಳ ಪರೀಕ್ಷೆಯನ್ನು ಕನ್ನಡದಲ್ಲಿಯೂ ಬರೆಯಲು ಆಗುವಂತೆ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಅನ್ಯ ಭಾಷೆ ಪುಸ್ತಕಗಳನ್ನು ಭಾಷಾಂತರಿಸಲು, ಪ್ರೊ.ಸಡಗೋಪನ್ ನೇತೃತ್ವದ ತಜ್ಞರ ಸಮಿತಿ ಶಿಫಾರಸಿನಂತೆ ಐಟಿಐಗಳನ್ನು ಕೆಐಟಿಗಳಾಗಿ ಅಭಿವೃದ್ಧಿಪಡಿಸಲು ₹ 50 ಕೋಟಿ, ಉತ್ತಮ ಆಡಳಿತ ನಿರ್ವಹಿಸುವ ವಿಶ್ವವಿದ್ಯಾಲಯಗಳಿಗೆ ತಲಾ ₹ 50 ಲಕ್ಷ ಪ್ರೋತ್ಸಾಹಧನ ನೀಡಲಾಗಿದೆ.</p>.<p>ಬೆಂಗಳೂರು ನಗರದ ಕೇಂದ್ರ ಭಾಗದ 5 ಕಿ.ಮೀ. ವ್ಯಾಪ್ತಿಯ ಒಳಗಿರುವ ಪಾರಂಪರಿಕ ಶೈಕ್ಷಣಿಕ ಸಂಸ್ಥೆಗಳನ್ನು ಹೊಂದಿರುವ ಪ್ರದೇಶವನ್ನು ಪಾರಂಪರಿಕ ಮತ್ತು ಶೈಕ್ಷಣಿಕ ಜಿಲ್ಲೆಯಾಗಿ ಘೋಷಿಸಲು ಅಧ್ಯಯನಕ್ಕೆ ಅವಕಾಶ ಕಲ್ಪಿಸಲಾಗಿದೆ. ಪಿಎಚ್.ಡಿ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯಗಳಲ್ಲಿ ಸರಳ, ಪಾರದರ್ಶಕ ಪ್ರವೇಶಕ್ಕೆ ಏಕರೂಪ ವ್ಯವಸ್ಥೆ ಕಲ್ಪಿಸಲಾಗುತ್ತಿದೆ.</p>.<p>ಅತಿ ಹೆಚ್ಚು ದಾಖಲಾತಿ ಹೊಂದಿರುವ ಸರ್ಕಾರಿ ಪ್ರಥಮದರ್ಜೆ ಕಾಲೇಜು ಹಾಗೂ ಸರ್ಕಾರಿ ಪಾಲಿಟೆಕ್ನಿಕ್ಗಳಿಗೆ ʻವೃದ್ಧಿʼ ಯೋಜನೆಯಡಿ ತಲಾ ₹ 2 ಕೋಟಿಯಂತೆ ₹ 124 ಕೋಟಿ ನೀಡಲಾಗಿದೆ. ಉನ್ನತ ಶಿಕ್ಷಣವನ್ನು ಬಲಪಡಿಸಲು ₹ 125 ಕೋಟಿ ಮೀಸಲಿಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕುವೆಂಪು ವಿಶ್ವವಿದ್ಯಾಲಯವನ್ನು ವಿಭಜಿಸಿ ಚಿಕ್ಕಮಗಳೂರಿನಲ್ಲಿ ನೂತನ ವಿಶ್ವವಿದ್ಯಾಲಯ ಸ್ಥಾಪಿಸಲಾಗುತ್ತಿದೆ. ಆದರೆ, ನೂತನ ವಿಶ್ವವಿದ್ಯಾಲಯಕ್ಕೆ ಯಾವುದೇ ಹೆಚ್ಚುವರಿ ಅನುದಾನ ಘೋಷಿಸಿಲ್ಲ. </p>.<p>ಬೀದರ್, ಹಾವೇರಿ, ಚಾಮರಾಜನಗರ, ಬಾಗಲಕೋಟೆ, ಕೊಡಗು, ಕೊಪ್ಪಳ ಮತ್ತು ಹಾಸನ ಜಿಲ್ಲೆಗಳಲ್ಲಿ ಸ್ಥಾಪಿಸಿರುವ ವಿಶ್ವವಿದ್ಯಾಲಯಗಳ ಮಾದರಿಯಲ್ಲೇ ಚಿಕ್ಕಮಗಳೂರು ವಿಶ್ವವಿದ್ಯಾಲಯವನ್ನು ತಂತ್ರಜ್ಞಾನದ ಗರಿಷ್ಠ ಬಳಕೆಯೊಂದಿಗೆ, ಕಡಿಮೆ ಮಾನವ ಸಂಪನ್ಮೂಲ ಒಳಗೊಂಡಂತೆ ಸ್ಥಾಪಿಸಲು ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಲಾಗಿದೆ.</p>.<p>ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ಹೊಸ ಪಾಲಿಟೆಕ್ನಿಕ್ ಆರಂಭ, ಮುಖ್ಯಮಂತ್ರಿ ತವರು ಕ್ಷೇತ್ರ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲ್ಲೂಕಿನ ಬಂಕಾಪುರದಲ್ಲಿನ ಪಾಲಿಟೆಕ್ನಿಕ್ ಅನ್ನು ಸರ್ಕಾರಿ ಎಂಜಿನಿಯರಿಂಗ್ ಕಾಲೇಜಾಗಿ ಮೇಲ್ದರ್ಜೆಗೇರಿಸಲಾಗುತ್ತದೆ.</p>.<p>ವೃತ್ತಿಪರ ಕೋರ್ಸ್ಗಳ ಪರೀಕ್ಷೆಯನ್ನು ಕನ್ನಡದಲ್ಲಿಯೂ ಬರೆಯಲು ಆಗುವಂತೆ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಅನ್ಯ ಭಾಷೆ ಪುಸ್ತಕಗಳನ್ನು ಭಾಷಾಂತರಿಸಲು, ಪ್ರೊ.ಸಡಗೋಪನ್ ನೇತೃತ್ವದ ತಜ್ಞರ ಸಮಿತಿ ಶಿಫಾರಸಿನಂತೆ ಐಟಿಐಗಳನ್ನು ಕೆಐಟಿಗಳಾಗಿ ಅಭಿವೃದ್ಧಿಪಡಿಸಲು ₹ 50 ಕೋಟಿ, ಉತ್ತಮ ಆಡಳಿತ ನಿರ್ವಹಿಸುವ ವಿಶ್ವವಿದ್ಯಾಲಯಗಳಿಗೆ ತಲಾ ₹ 50 ಲಕ್ಷ ಪ್ರೋತ್ಸಾಹಧನ ನೀಡಲಾಗಿದೆ.</p>.<p>ಬೆಂಗಳೂರು ನಗರದ ಕೇಂದ್ರ ಭಾಗದ 5 ಕಿ.ಮೀ. ವ್ಯಾಪ್ತಿಯ ಒಳಗಿರುವ ಪಾರಂಪರಿಕ ಶೈಕ್ಷಣಿಕ ಸಂಸ್ಥೆಗಳನ್ನು ಹೊಂದಿರುವ ಪ್ರದೇಶವನ್ನು ಪಾರಂಪರಿಕ ಮತ್ತು ಶೈಕ್ಷಣಿಕ ಜಿಲ್ಲೆಯಾಗಿ ಘೋಷಿಸಲು ಅಧ್ಯಯನಕ್ಕೆ ಅವಕಾಶ ಕಲ್ಪಿಸಲಾಗಿದೆ. ಪಿಎಚ್.ಡಿ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯಗಳಲ್ಲಿ ಸರಳ, ಪಾರದರ್ಶಕ ಪ್ರವೇಶಕ್ಕೆ ಏಕರೂಪ ವ್ಯವಸ್ಥೆ ಕಲ್ಪಿಸಲಾಗುತ್ತಿದೆ.</p>.<p>ಅತಿ ಹೆಚ್ಚು ದಾಖಲಾತಿ ಹೊಂದಿರುವ ಸರ್ಕಾರಿ ಪ್ರಥಮದರ್ಜೆ ಕಾಲೇಜು ಹಾಗೂ ಸರ್ಕಾರಿ ಪಾಲಿಟೆಕ್ನಿಕ್ಗಳಿಗೆ ʻವೃದ್ಧಿʼ ಯೋಜನೆಯಡಿ ತಲಾ ₹ 2 ಕೋಟಿಯಂತೆ ₹ 124 ಕೋಟಿ ನೀಡಲಾಗಿದೆ. ಉನ್ನತ ಶಿಕ್ಷಣವನ್ನು ಬಲಪಡಿಸಲು ₹ 125 ಕೋಟಿ ಮೀಸಲಿಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>