ಸೋಮವಾರಪೇಟೆ ತಾಲ್ಲೂಕಿನ ಜಂಬೂರಿನಲ್ಲಿ ನೆರೆ ಸಂತ್ರಸ್ತರ ಮನೆ ನಿರ್ಮಾಣ ಕಾಮಗಾರಿ ವೀಕ್ಷಿಸಿದ ನಂತರ ಮಾತನಾಡಿ, ‘ಸಿದ್ದರಾಮಯ್ಯ ತಮ್ಮ ಕ್ಷೇತ್ರವಾದ ಬಾದಾಮಿಯ ಅಭಿವೃದ್ಧಿಯತ್ತ ಗಮನ ಹರಿಸಿದ್ದಾರೆ. ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸುತ್ತಿದ್ದಾರೆ. ತಮ್ಮ ಐದು ವರ್ಷದ ಆಡಳಿತಾವಧಿಯಲ್ಲಿ ಉತ್ತಮ ಕೆಲಸ ಮಾಡಿದ್ದರು. ರಾಜ್ಯ ಕಂಡ ಅತ್ಯುತ್ತಮ ಮುಖ್ಯಮಂತ್ರಿಗಳಲ್ಲಿ ಅವರೂ ಒಬ್ಬರು. ಅಭಿವೃದ್ಧಿ ಕೆಲಸಗಳನ್ನು ಜನರು ಈಗಲೂ ಮೆಲುಕು ಹಾಕುತ್ತಿದ್ದಾರೆ. ಅವರ ಶಕ್ತಿ, ಸೌಂಡು ಕಡಿಮೆಯಾಗಿಲ್ಲ’ ಎಂದು ಹೊಗಳಿದರು.