<p><strong>ಸುಂಟಿಕೊಪ್ಪ:</strong> ಸುಂಟಿಕೊಪ್ಪ ಹೋಬಳಿ ವ್ಯಾಪ್ತಿಯಲ್ಲಿ ಕಾಡಾನೆಗಳು ಪ್ರತ್ಯಕ್ಷಗೊಂಡಿದ್ದು, ಗ್ರಾಮಸ್ಥರಲ್ಲಿ ಆತಂಕದ ವಾತಾವರಣ ಉಂಟು ಮಾಡಿದೆ.</p>.<p>ಆಹಾರದ ಕೊರತೆಯಿಂದ ಬಳಲುತ್ತಿರುವ ಕಾಡಾನೆಗಳು ಸುತ್ತಮುತ್ತಲಿನ ಕಾಫಿ, ಮೆಣಸು, ಹಲಸಿನ ತೋಟಗಳಿಗೆ ಲಗ್ಗೆಯಿಡುತ್ತಿದ್ದು, ಫಸಲಿಗೆ ಬಂದ ಬೆಳೆ ಹಾನಿಯಾಗುತ್ತಿದೆ.</p>.<p>ಗುರುವಾರ ಮಧ್ಯಾಹ್ನದ ವೇಳೆಯೇ ಸಮೀಪದ ಶ್ರೀದೇವಿ ತೋಟದಲ್ಲಿ ಕಾಡಾನೆಯೊಂದು ಕಾಣಿಸಿಕೊಂಡಿದ್ದು, ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಹೆದರಿ ಅಲ್ಲಿಂದ ಓಡಿಹೋಗಿದ್ದಾರೆ. ಇದರಿಂದ ಹೆದರಿದ ಕಾಡಾನೆ ಅಲ್ಲಿನ ಕಾಫಿ ಗಿಡಗಳನ್ನು ತುಳಿದು ನಾಶಪಡಿಸಿ ಅಲ್ಲಿಂದ ಪಕ್ಕದ ತೋಟದತ್ತ ಪಲಾಯನ ಮಾಡಿದೆ.</p>.<p>ಬುಧವಾರ ರಾತ್ರಿ ನೆಟ್ಲಿ ‘ಬಿ’ ತೋಟದ ಕಾರ್ಮಿಕರ ಲೈನ್ ಮನೆಯತ್ತ ಹಾದು ಹೋಗಿದ್ದು, ಕಾರ್ಮಿಕರು ಭಯಭೀತರಾಗಿದ್ದಾರೆ.</p>.<p>ಪನ್ಯ, ನಾಕೂರು, ಕಂಬಿಬಾಣೆ, ಮತ್ತಿಕಾಡು ಭಾಗಗಳಲ್ಲೂ ಕಾಡಾನೆಗಳು ಬೆಳೆದು ನಿಂತ ಫಸಲುಗಳನ್ನು ತಿಂದು ನಾಶ ಪಡಿಸುತ್ತಿವೆ.</p>.<p>ಈ ಭಾಗಗಳಲ್ಲಿ ರಾತ್ರಿ ವೇಳೆಯಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಿದ್ದ ಕಾಡಾನೆಗಳು ಈಚೆಗೆ ಹಗಲು ಹೊತ್ತಿನಲ್ಲೂ ದಾಳಿ ಮಾಡುತ್ತಿರುವುದರಿಂದ ಕಾರ್ಮಿಕರು, ಸಾರ್ವಜನಿಕರು ಹಾಗೂ ವಾಹನ ಚಾಲಕರು ಓಡಾಡಲು ಭಯ ಪಡುವಂತಾಗಿದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುಂಟಿಕೊಪ್ಪ:</strong> ಸುಂಟಿಕೊಪ್ಪ ಹೋಬಳಿ ವ್ಯಾಪ್ತಿಯಲ್ಲಿ ಕಾಡಾನೆಗಳು ಪ್ರತ್ಯಕ್ಷಗೊಂಡಿದ್ದು, ಗ್ರಾಮಸ್ಥರಲ್ಲಿ ಆತಂಕದ ವಾತಾವರಣ ಉಂಟು ಮಾಡಿದೆ.</p>.<p>ಆಹಾರದ ಕೊರತೆಯಿಂದ ಬಳಲುತ್ತಿರುವ ಕಾಡಾನೆಗಳು ಸುತ್ತಮುತ್ತಲಿನ ಕಾಫಿ, ಮೆಣಸು, ಹಲಸಿನ ತೋಟಗಳಿಗೆ ಲಗ್ಗೆಯಿಡುತ್ತಿದ್ದು, ಫಸಲಿಗೆ ಬಂದ ಬೆಳೆ ಹಾನಿಯಾಗುತ್ತಿದೆ.</p>.<p>ಗುರುವಾರ ಮಧ್ಯಾಹ್ನದ ವೇಳೆಯೇ ಸಮೀಪದ ಶ್ರೀದೇವಿ ತೋಟದಲ್ಲಿ ಕಾಡಾನೆಯೊಂದು ಕಾಣಿಸಿಕೊಂಡಿದ್ದು, ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಹೆದರಿ ಅಲ್ಲಿಂದ ಓಡಿಹೋಗಿದ್ದಾರೆ. ಇದರಿಂದ ಹೆದರಿದ ಕಾಡಾನೆ ಅಲ್ಲಿನ ಕಾಫಿ ಗಿಡಗಳನ್ನು ತುಳಿದು ನಾಶಪಡಿಸಿ ಅಲ್ಲಿಂದ ಪಕ್ಕದ ತೋಟದತ್ತ ಪಲಾಯನ ಮಾಡಿದೆ.</p>.<p>ಬುಧವಾರ ರಾತ್ರಿ ನೆಟ್ಲಿ ‘ಬಿ’ ತೋಟದ ಕಾರ್ಮಿಕರ ಲೈನ್ ಮನೆಯತ್ತ ಹಾದು ಹೋಗಿದ್ದು, ಕಾರ್ಮಿಕರು ಭಯಭೀತರಾಗಿದ್ದಾರೆ.</p>.<p>ಪನ್ಯ, ನಾಕೂರು, ಕಂಬಿಬಾಣೆ, ಮತ್ತಿಕಾಡು ಭಾಗಗಳಲ್ಲೂ ಕಾಡಾನೆಗಳು ಬೆಳೆದು ನಿಂತ ಫಸಲುಗಳನ್ನು ತಿಂದು ನಾಶ ಪಡಿಸುತ್ತಿವೆ.</p>.<p>ಈ ಭಾಗಗಳಲ್ಲಿ ರಾತ್ರಿ ವೇಳೆಯಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಿದ್ದ ಕಾಡಾನೆಗಳು ಈಚೆಗೆ ಹಗಲು ಹೊತ್ತಿನಲ್ಲೂ ದಾಳಿ ಮಾಡುತ್ತಿರುವುದರಿಂದ ಕಾರ್ಮಿಕರು, ಸಾರ್ವಜನಿಕರು ಹಾಗೂ ವಾಹನ ಚಾಲಕರು ಓಡಾಡಲು ಭಯ ಪಡುವಂತಾಗಿದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>