ಬಳಿಕ ಅರಣ್ಯ ಇಲಾಖೆಯು ಗಡಿ ಪರಿಷ್ಕರಣಾ ಸಮಿತಿ ರಚಿಸಿ ವರದಿ ಪಡೆದಿತ್ತು. ’1974ರಲ್ಲಿ ಅಭಯಾರಣ್ಯದ ವ್ಯಾಪ್ತಿ ನಿರ್ಧರಿಸಿರುವುದು ಅವೈಜ್ಞಾನಿಕ. ಅರಣ್ಯೇತರ ಪ್ರದೇಶಗಳನ್ನೂ ಅಭಯಾರಣ್ಯದ ವ್ಯಾಪ್ತಿಗೆ ಸೇರಿಸಲಾಗಿತ್ತು. ಇದರಿಂದಾಗಿ, ಜನರಿಗೆ ತೊಂದರೆಯಾಗುತ್ತಿದೆ. ಗಡಿಯ ಪರಿಷ್ಕರಣೆ ಮಾಡಿದರೆ ಅಭಯಾರಣ್ಯದ ನಿರ್ವಹಣೆ ಪರಿಣಾಮಕಾರಿ ಆಗಲಿದೆ’ ಎಂದು ಸಮಿತಿ ವರದಿ ನೀಡಿತ್ತು. ವನ್ಯಜೀವಿ ಧಾಮದ ವ್ಯಾಪ್ತಿಯನ್ನು 700 ಚದರ ಕಿ.ಮೀಟರ್ನಿಂದ 395 ಚದರ ಕಿ.ಮೀಗೆ ಇಳಿಸಲು ರಾಜ್ಯ ಸರ್ಕಾರ ಇತ್ತೀಚೆಗೆ ತೀರ್ಮಾನಿಸಿತ್ತು. ‘ವನ್ಯಜೀವಿಧಾಮದ ಗಡಿಗಳ ಕುರಿತ ಗೊಂದಲದಿಂದಾಗಿ ಪರಿಸರ ಸೂಕ್ಷ್ಮ ವಲಯದ ಅಧಿಸೂಚನೆ ವಿಳಂಬವಾಗಿದೆ. ಈಚಿನ ವರ್ಷಗಳಲ್ಲಿ ಮಾನವ ಹಸ್ತಕ್ಷೇಪವೂ ಹೆಚ್ಚಾಗಿದೆ’ ಎಂದು ಎನ್ಜಿಟಿ ಆದೇಶದಲ್ಲಿ ಉಲ್ಲೇಖಿಸಲಾಗಿದೆ.