‘ಜಿಲ್ಲೆಯಲ್ಲಿನ ಪಕ್ಷದ ಹಿರಿಯ ನಾಯಕರಾದ ಸಂತೋಷ ಲಾಡ್, ವಿನಯ ಕುಲಕರ್ಣಿ ಹಾಗೂ ಪ್ರಸಾದ ಅಬ್ಬಯ್ಯ ಅವರಿಗೆ ಸಚಿವ ಸ್ಥಾನ ನೀಡಿದರೆ ನನ್ನಷ್ಟು ಸಂತೋಷ ಪಡುವವರು ಯಾರೂ ಇಲ್ಲ. ಆದರೆ, ಸಂಪುಟದಲ್ಲಿ ಸ್ಥಾನ ನೀಡುತ್ತೇವೆ ಎಂದರೆ ಯಾರೂ ಬೇಡ ಎನ್ನುವುದಿಲ್ಲ. ಹೊಸಬರಿಗೆ ಅವಕಾಶ ನೀಡುವುದಾದರೆ ನನಗೆ ಕೃಷಿ ಸಚಿವ ಸ್ಥಾನ ನೀಡುವಂತೆ ವರಿಷ್ಠರ ಮುಂದೆ ಬೇಡಿಕೆ ಇಟ್ಟಿದ್ದೇನೆ’ ಎಂದು ತಿಳಿಸಿದರು.
‘ಜಗದೀಶ ಶೆಟ್ಟರ್ ಹಿರಿಯ ರಾಜಕಾರಣಿ, ಮುಖ್ಯಮಂತ್ರಿಯಾದವರು. ಅವರಿಗೆ ಸಚಿವ ಸ್ಥಾನ ನೀಡುವುದರಲ್ಲಿ ತಪ್ಪಿಲ್ಲ. ಅವರ ಹಿರಿತನಕ್ಕೆ ಪಕ್ಷ ಸಮಾನವಾದ ಹುದ್ದೆ ನೀಡುವುದು ಸೂಕ್ತ’ ಎಂದರು.
‘ಮಹದಾಯಿ ಯೋಜನೆ ಅನುಷ್ಠಾನಕ್ಕೆ ಬಿಜೆಪಿ ಟೆಂಡರ್ ಕರಿದಿರುವುದಾಗಿ ಹೇಳಿದ್ದು, ಅದರ ಬಗ್ಗೆ ಅಧ್ಯಯನ ನಡೆಸಬೇಕು. ಅಧಿಕಾರಿಗಳ ಜೊತೆ ಚರ್ಚಿಸಿ ಸದ್ಯದ ಪರಿಸ್ಥಿತಿ ತಿಳಿದುಕೊಳ್ಳಬೇಕಿದೆ. ನೋಟಿಸ್ ತೋರಿಸಿ ಜನರ ದಿಕ್ಕು ತಪ್ಪಿಸಲಾಗಿದೆ. ಅರಣ್ಯ ಇಲಾಖೆಯಿಂದ ಒಪ್ಪಿಗೆಯೇ ಸಿಕ್ಕಿಲ್ಲ’ ಎಂದು ಹೇಳಿದರು.