<p><strong>ನವದೆಹಲಿ:</strong> ‘ನನ್ನ ನಿರಂತರ ಪ್ರಯತ್ನದಿಂದಾಗಿ ಎನ್ಎಚ್ಎಂ ಯೋಜನೆಯಡಿ ಗುತ್ತಿಗೆ ಆಧಾರದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರ ಮತ್ತು ದಾದಿಯರ ವೇತನವು ದೇಶದಾದ್ಯಂತ ಶೇ 25 ರಷ್ಟು ಹೆಚ್ಚಳ ಆಗಿದೆ’ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಾ.ಸಿ.ಎನ್.ಮಂಜುನಾಥ ತಿಳಿಸಿದ್ದಾರೆ. </p>.<p>‘ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ವೈದ್ಯರು ಮತ್ತು ಸ್ಟಾಫ್ ನರ್ಸ್ಗಳ ಪ್ರಸ್ತುತ ವೇತನ ಹೆಚ್ಚಳ ಮಾಡುವಂತೆ 4-5 ತಿಂಗಳುಗಳಿಂದ ನಿರಂತರವಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು’ ನನ್ನ ಮನವಿಗೆ ಸ್ಪಂದಿಸಿ ಕೇಂದ್ರ ಸರ್ಕಾರವು ವೇತನ ಹೆಚ್ಚಳ ಮಾಡಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. </p>.<p>‘ಈ ಬಗ್ಗೆ ಸಂಸತ್ ಅಧಿವೇಶನ ಸೇರಿದಂತೆ ಕೇಂದ್ರ ಆರೋಗ್ಯ ಸ್ಥಾಯಿ ಸಮಿತಿ ಸಭೆಯಲ್ಲೂ ವಿಷಯ ಪ್ರಸ್ತಾಪಿಸಿ ಈ ಬಗ್ಗೆ ಕ್ರಮ ವಹಿಸುವಂತೆ ಮನವಿ ಮಾಡಲಾಗಿತ್ತು. ಕೇಂದ್ರ ಆರೋಗ್ಯ ಸಚಿವ ಜೆ.ಪಿ ನಡ್ಡಾ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೂ ವೈಯಕ್ತಿಕವಾಗಿ ಈ ಬಗ್ಗೆ ಮನವಿ ಸಲ್ಲಿಸಲಾಗಿತ್ತು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ನನ್ನ ನಿರಂತರ ಪ್ರಯತ್ನದಿಂದಾಗಿ ಎನ್ಎಚ್ಎಂ ಯೋಜನೆಯಡಿ ಗುತ್ತಿಗೆ ಆಧಾರದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರ ಮತ್ತು ದಾದಿಯರ ವೇತನವು ದೇಶದಾದ್ಯಂತ ಶೇ 25 ರಷ್ಟು ಹೆಚ್ಚಳ ಆಗಿದೆ’ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಾ.ಸಿ.ಎನ್.ಮಂಜುನಾಥ ತಿಳಿಸಿದ್ದಾರೆ. </p>.<p>‘ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ವೈದ್ಯರು ಮತ್ತು ಸ್ಟಾಫ್ ನರ್ಸ್ಗಳ ಪ್ರಸ್ತುತ ವೇತನ ಹೆಚ್ಚಳ ಮಾಡುವಂತೆ 4-5 ತಿಂಗಳುಗಳಿಂದ ನಿರಂತರವಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು’ ನನ್ನ ಮನವಿಗೆ ಸ್ಪಂದಿಸಿ ಕೇಂದ್ರ ಸರ್ಕಾರವು ವೇತನ ಹೆಚ್ಚಳ ಮಾಡಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. </p>.<p>‘ಈ ಬಗ್ಗೆ ಸಂಸತ್ ಅಧಿವೇಶನ ಸೇರಿದಂತೆ ಕೇಂದ್ರ ಆರೋಗ್ಯ ಸ್ಥಾಯಿ ಸಮಿತಿ ಸಭೆಯಲ್ಲೂ ವಿಷಯ ಪ್ರಸ್ತಾಪಿಸಿ ಈ ಬಗ್ಗೆ ಕ್ರಮ ವಹಿಸುವಂತೆ ಮನವಿ ಮಾಡಲಾಗಿತ್ತು. ಕೇಂದ್ರ ಆರೋಗ್ಯ ಸಚಿವ ಜೆ.ಪಿ ನಡ್ಡಾ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೂ ವೈಯಕ್ತಿಕವಾಗಿ ಈ ಬಗ್ಗೆ ಮನವಿ ಸಲ್ಲಿಸಲಾಗಿತ್ತು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>