<p><strong>ಬೆಂಗಳೂರು:</strong> ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರಾದ ಜಮೀರ್ ಅಹಮದ್ ಖಾನ್ ಹಾಗೂ ರಿಜ್ವಾನ್ ಅರ್ಷದ್ ಅವರನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ) ವಿಚಾರಣೆ ನಡೆಸಿದೆ.</p>.<p>ಪ್ರಕರಣ ಸಂಬಂಧ ಮಾಹಿತಿ ಕಲೆಹಾಕುವ ಸಲುವಾಗಿ ದೊಮ್ಮಲೂರಿನಲ್ಲಿರುವ ಎನ್ಐಎ ಕಚೇರಿಗೆ ಬರುವಂತೆ ಅಧಿಕಾರಿಗಳು ದೂರವಾಣಿ ಮೂಲಕ ಇಬ್ಬರೂ ಶಾಸಕರಿಗೆ ತಿಳಿಸಿದ್ದರು. ಅದರಂತೆ ರಿಜ್ವಾನ್ ಅರ್ಷದ್ ಸೋಮವಾರ (ಅ.12) ಹಾಗೂ ಜಮೀರ್ ಅಹಮದ್ ಮಂಗಳವಾರ (ಅ.13) ಎನ್ಐಎ ವಿಚಾರಣೆ ಎದುರಿಸಿದರು.</p>.<p>ಈ ಬಗ್ಗೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಶಾಸಕ ರಿಜ್ವಾನ್, ‘ಎನ್ಐಎ ನಮಗೆ ನೋಟಿಸ್ ನೀಡಲಿಲ್ಲ. ಮಾಹಿತಿ ಪಡೆಯಲು ಸಹಕರಿಸುವಂತೆ ಕರೆ ಮಾಡಿದ್ದರು. ಗಲಭೆ ವೇಳೆ ಏನೆಲ್ಲಾ ನಡೆದಿದೆ ಎಂಬುದರ ಬಗ್ಗೆ ಎನ್ಐಎ ಮಾಹಿತಿ ಕಲೆ ಹಾಕುತ್ತಿದೆ. ನನಗೆ ಗೊತ್ತಿರುವ ಮಾಹಿತಿಯನ್ನು ನೀಡಿದ್ದೇನೆ. ಜಮೀರ್ ಸಹ ಮಾಹಿತಿ ನೀಡಿದ್ದಾರೆ. ತನಿಖೆಗೆ ಮುಂದೆಯೂ ಸಹಕರಿಸುತ್ತೇವೆ’ ಎಂದಿದ್ದಾರೆ.</p>.<p>‘ಗಲಭೆ ನಿಯಂತ್ರಿಸಲು ಸಹಕಾರ ಕೋರಿ ಪೊಲೀಸ್ ಅಧಿಕಾರಿಗಳು ಕೇಳಿಕೊಂಡ ಕಾರಣ ಗಲಭೆ ಸ್ಥಳಕ್ಕೆ ಭೇಟಿ ನೀಡಿದೆವು. ಆದರೆ, ಪರಿಸ್ಥಿತಿ ಹದ್ದುಮೀರಿತ್ತು. ಅಲ್ಲಿನ ಸಂಗತಿಗಳ ವಿಚಾರವಾಗಿ ಮಾಹಿತಿ ಹಂಚಿಕೊಂಡಿದ್ದೇವೆ. ಪ್ರಕರಣದ ತನಿಖೆಯಲ್ಲಿ ರಾಜಕೀಯ ಹಸ್ತಕ್ಷೇಪ ಇರಬಾರದು. ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು’ ಎಂದೂ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರಾದ ಜಮೀರ್ ಅಹಮದ್ ಖಾನ್ ಹಾಗೂ ರಿಜ್ವಾನ್ ಅರ್ಷದ್ ಅವರನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ) ವಿಚಾರಣೆ ನಡೆಸಿದೆ.</p>.<p>ಪ್ರಕರಣ ಸಂಬಂಧ ಮಾಹಿತಿ ಕಲೆಹಾಕುವ ಸಲುವಾಗಿ ದೊಮ್ಮಲೂರಿನಲ್ಲಿರುವ ಎನ್ಐಎ ಕಚೇರಿಗೆ ಬರುವಂತೆ ಅಧಿಕಾರಿಗಳು ದೂರವಾಣಿ ಮೂಲಕ ಇಬ್ಬರೂ ಶಾಸಕರಿಗೆ ತಿಳಿಸಿದ್ದರು. ಅದರಂತೆ ರಿಜ್ವಾನ್ ಅರ್ಷದ್ ಸೋಮವಾರ (ಅ.12) ಹಾಗೂ ಜಮೀರ್ ಅಹಮದ್ ಮಂಗಳವಾರ (ಅ.13) ಎನ್ಐಎ ವಿಚಾರಣೆ ಎದುರಿಸಿದರು.</p>.<p>ಈ ಬಗ್ಗೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಶಾಸಕ ರಿಜ್ವಾನ್, ‘ಎನ್ಐಎ ನಮಗೆ ನೋಟಿಸ್ ನೀಡಲಿಲ್ಲ. ಮಾಹಿತಿ ಪಡೆಯಲು ಸಹಕರಿಸುವಂತೆ ಕರೆ ಮಾಡಿದ್ದರು. ಗಲಭೆ ವೇಳೆ ಏನೆಲ್ಲಾ ನಡೆದಿದೆ ಎಂಬುದರ ಬಗ್ಗೆ ಎನ್ಐಎ ಮಾಹಿತಿ ಕಲೆ ಹಾಕುತ್ತಿದೆ. ನನಗೆ ಗೊತ್ತಿರುವ ಮಾಹಿತಿಯನ್ನು ನೀಡಿದ್ದೇನೆ. ಜಮೀರ್ ಸಹ ಮಾಹಿತಿ ನೀಡಿದ್ದಾರೆ. ತನಿಖೆಗೆ ಮುಂದೆಯೂ ಸಹಕರಿಸುತ್ತೇವೆ’ ಎಂದಿದ್ದಾರೆ.</p>.<p>‘ಗಲಭೆ ನಿಯಂತ್ರಿಸಲು ಸಹಕಾರ ಕೋರಿ ಪೊಲೀಸ್ ಅಧಿಕಾರಿಗಳು ಕೇಳಿಕೊಂಡ ಕಾರಣ ಗಲಭೆ ಸ್ಥಳಕ್ಕೆ ಭೇಟಿ ನೀಡಿದೆವು. ಆದರೆ, ಪರಿಸ್ಥಿತಿ ಹದ್ದುಮೀರಿತ್ತು. ಅಲ್ಲಿನ ಸಂಗತಿಗಳ ವಿಚಾರವಾಗಿ ಮಾಹಿತಿ ಹಂಚಿಕೊಂಡಿದ್ದೇವೆ. ಪ್ರಕರಣದ ತನಿಖೆಯಲ್ಲಿ ರಾಜಕೀಯ ಹಸ್ತಕ್ಷೇಪ ಇರಬಾರದು. ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು’ ಎಂದೂ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>