ಗಲಭೆ ಸಂಬಂಧ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ‘ಕಾನೂನು ಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆಯಡಿ (ಯುಎಪಿಎ) ದಾಖಲಾಗಿರುವ ಪ್ರಕರಣಗಳನ್ನು ಎನ್ಐಎಗೆ ವರ್ಗಾಯಿಸುವ ಬಗ್ಗೆ ಮೌಖಿಕ ಸೂಚನೆ ದೊರೆತಿದೆ. ಸೆ.18ರೊಳಗೆ ಆದೇಶ ಹೊರ ಬೀಳುವ ಸಾಧ್ಯತೆ ಇದೆ’ ಎಂದು ವಿಶೇಷ ಪಬ್ಲಿಕ್ ಪ್ಯಾಸಿಕ್ಯೂಟರ್ ಪ್ರಸನ್ನಕುಮಾರ್ ತಿಳಿಸಿದರು.