‘ಹಾಸನ ಕ್ಷೇತ್ರದಿಂದ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿ ಸಂಸತ್ತಿನಲ್ಲಿ ಕನ್ನಡದಲ್ಲೇ ಪ್ರಮಾಣವಚನ ಸ್ವೀಕಾರ ಮಾಡಿದ ಆತ್ಮೀಯ ಸಹೋದರ ಪ್ರಜ್ವಲ್ ರೇವಣ್ಣನವರಿಗೆ ಶುಭ ಕೋರುತ್ತೇನೆ. ನೆಲ, ಜಲ, ಭಾಷೆ, ರೈಲ್ವೆ ಯೋಜನೆ ಹಾಗೂ ನಮ್ಮ ರಾಜ್ಯ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಕುರಿತು ಸಂಸತ್ತಿನಲ್ಲಿ ಸಮರ್ಥವಾಗಿ ಧ್ವನಿ ಎತ್ತುವ ಮೂಲಕ ಪ್ರಾದೇಶಿಕ ಹಿತಾಸಕ್ತಿಯನ್ನು ರಕ್ಷಿಸುವ ಪ್ರಜಾಸತ್ತಾತ್ಮಕ ಹೋರಾಟ ನಡೆಸಲಿದ್ದಾರೆ ಎನ್ನುವ ನಂಬಿಕೆ ನನ್ನದು,’ ಎಂದು ಅವರು ಬರೆದಿದ್ದಾರೆ.