ರಾಮನಗರ: ಪೂರ್ವ ನಿಗದಿಯಂತೆ ಇದೇ 17ರಂದು ಮನೆಯ ಆವರಣದಲ್ಲೇ ನಿಖಿಲ್-ರೇವತಿ ವಿವಾಹ ನೆರವೇರಿಸಲಾಗುವುದು ಎಂದು ಜೆಡಿಎಸ್ ಶಾಸಕ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು.
ಲಾಕ್ಡೌನ್ ಹಿನ್ನೆಲೆಯಲ್ಲಿ ಜನರ ನಡುವೆ ಮದುವೆ ಮಾಡಲು ಆಗದು. ಎರಡೂ ಕುಟುಂಬ ಸದಸ್ಯರು ಮಾತ್ರ ಸೇರಿ ಅಂದೇ ಮದುವೆ ಶಾಸ್ತ್ರ ಮುಗಿಸುತ್ತೇವೆ. ಮುಂದೆ ಅವಕಾಶ ಸಿಕ್ಕರೆ ರಾಮನಗರದಲ್ಲಿ ಕಾರ್ಯಕ್ರಮ ಆಯೋಜಿಸುತ್ತೇವೆ ಎಂದರು.