ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು | ಮೈತ್ರಿ ಬೆನ್ನಲ್ಲೇ ಯಡಿಯೂರಪ್ಪ ಭೇಟಿ ಮಾಡಿದ ನಿಖಿಲ್‌ ಕುಮಾರಸ್ವಾಮಿ

Published 24 ಸೆಪ್ಟೆಂಬರ್ 2023, 6:51 IST
Last Updated 24 ಸೆಪ್ಟೆಂಬರ್ 2023, 6:51 IST
ಅಕ್ಷರ ಗಾತ್ರ

ಬೆಂಗಳೂರು: ಬಿಜೆಪಿ– ಜೆಡಿಎಸ್‌ ಮೈತ್ರಿ ಘೋಷಿಸಿದ ಬೆನ್ನಲ್ಲೇ ಜೆಡಿಎಸ್‌ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಇಂದು ಬೆಂಗಳೂರಿನಲ್ಲಿ ಭೇಟಿ ಮಾಡಿದ್ದಾರೆ.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ನಿಖಿಲ್‌ ಕುಮಾರಸ್ವಾಮಿ ಯಡಿಯೂರಪ್ಪನವರ ಆಶಿರ್ವಾದ ಪಡೆಯಲು ಬಂದಿರುವುದಾಗಿ ತಿಳಿಸಿದ್ದಾರೆ.

‘ನಮಗೆಲ್ಲ ತಿಳಿದಿರುವ ಹಾಗೆ ಜೆಡಿಎಸ್ ಮತ್ತು ಬಿಜೆಪಿ ಈಗ ಎನ್‌ಡಿಎ ಮೈತ್ರಿಕೂಟದ ಭಾಗವಾಗಿವೆ. ಯಡಿಯೂರಪ್ಪ ರಾಜ್ಯದ ಹಿರಿಯ ನಾಯಕರಾಗಿದ್ದು, ಅವರ ಆಶೀರ್ವಾದ ಪಡೆಯಲು ನಾನು ಇಲ್ಲಿಗೆ ಬಂದಿದ್ದೇನೆ. ಅವರು ಎಲ್ಲರೊಂದಿಗೂ ಉತ್ತಮ ಬಾಂದವ್ಯ ಹೊಂದಿದ್ದಾರೆ’ ಎಂದಿದ್ದಾರೆ.

ಈ ವೇಳೆ ಯಡಿಯೂರ‍ಪ್ಪನವರಿಗೆ ಶಾಲು ಹೊದಿಸಿ ಸನ್ಮಾನ ಮಾಡಿದ ನಿಖಿಲ್‌ ಕುಮಾರಸ್ವಾಮಿ, ಕೃಷ್ಣನ ಮೂರ್ತಿಯನ್ನು ಉಡುಗೊರೆಯಾಗಿ ನೀಡಿದ್ದಾರೆ.

ಶುಕ್ರವಾರ ಜೆಡಿಎಸ್‌ ಪಕ್ಷ ಎನ್‌ಡಿಎ ಒಕ್ಕೂಟವನ್ನು ಸೇರಿತ್ತು. ಆ ಮೂಲಕ ಮುಂದಿನ ಲೋಕಸಭಾ ಚುನಾವಣೆಗೆ ಬಿಜೆಪಿಯ ಜೊತೆ ಸ್ಪರ್ಧಿಸಲು ಅಣಿಯಾಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT