<p><strong>ಬೆಂಗಳೂರು: </strong>ನೆರೆಯ ರಾಜ್ಯ ಕೇರಳದಲ್ಲಿ ನಿಫಾ ವೈರಾಣು ಕಾಣಿಸಿಕೊಂಡಿರುವುದರಿಂದ ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಕೊಡಗು ಹಾಗೂ ಚಾಮರಾಜನಗರದಲ್ಲಿಕಟ್ಟೆಚ್ಚರ ವಹಿಸಿ, ಅಲ್ಲಿಂದ ಬರುವವರಿಗೆ ತಪಾಸಣೆ ನಡೆಸುವಂತೆ ಆರೋಗ್ಯ ಇಲಾಖೆ ಸೂಚಿಸಿದೆ.</p>.<p>ಈ ಬಗ್ಗೆ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಸುತ್ತೋಲೆ ಹೊರಡಿಸಿದ್ದಾರೆ. ‘ಈ ವೈರಾಣು 2018ರಲ್ಲಿ ಕೇರಳದಲ್ಲಿ ಕಾಣಿಸಿಕೊಂಡಿತ್ತು. ದೃಢ ಪ್ರಕರಣ ಹಾಗೂ ಮರಣ ಪ್ರಕರಣವೂ ವರದಿಯಾಗಿದ್ದವು. ಈ ರೋಗವು ಶೇ 40ರಿಂದ ಶೇ 75ರವರೆಗೆ ಮರಣ ಪ್ರಮಾಣವನ್ನು ಹೊಂದಿದೆ. ಹಾಗಾಗಿ, ಈ ಪ್ರಕರಣ ಕೇರಳದಲ್ಲಿ ವರದಿಯಾಗಿರುವುದರಿಂದ ರಾಜ್ಯದಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು. ಅದರಲ್ಲೂ ಕೇರಳಕ್ಕೆ ಹೊಂದಿಕೊಂಡಿರುವ ಗಡಿ ಜಿಲ್ಲೆಗಳಲ್ಲಿ ವಿಶೇಷ ನಿಗಾ ಇಡಬೇಕು’ ಎಂದು ತಿಳಿಸಿದ್ದಾರೆ.</p>.<p>‘ಕೇರಳದಿಂದ ಇಲ್ಲಿಗೆ ಬರುವವರು ರೋಗ ಲಕ್ಷಣಗಳನ್ನು ಹೊಂದಿದ್ದಾರೆಯೇ ಎನ್ನುವುದನ್ನು ಪರಿಶೀಲಿಸಿ, ಶಂಕಿತರನ್ನು ಗುರುತಿಸಬೇಕು. ಅಂಥವರ ಮಾದರಿಗಳನ್ನು ಸಂಗ್ರಹಿಸಿ, ಪುಣೆಯ ವೈರಾಣು<br />ವಿಜ್ಞಾನ ಸಂಸ್ಥೆಗೆ (ಎನ್ಐವಿ) ಕಳುಹಿಸಬೇಕು. ಸದ್ಯ ಈ ಸೋಂಕಿಗೆ ಚಿಕಿತ್ಸೆಯಿಲ್ಲ. ಆದರೆ, ಪೂರಕ ಚಿಕಿತ್ಸೆ ನೀಡುವ ಮೂಲಕ ಮರಣ ಪ್ರಮಾಣವನ್ನು ತಗ್ಗಿಸಲು ಸಾಧ್ಯ’ ಎಂದು ಹೇಳಿದ್ದಾರೆ.</p>.<p class="Briefhead">ನಿಫಾ ಲಕ್ಷಣಗಳಿದ್ದರೆ 104ಕ್ಕೆ ಕರೆ ಮಾಡಿ</p>.<p>‘ಜ್ವರ, ಮೈಕೈ ನೋವು, ತಲೆನೋವು, ನಡುಕ, ವಾಂತಿ, ನಿದ್ರಾಲಸ್ಯ, ತೊದಲುವಿಕೆ ಹಾಗೂ ಪ್ರಜ್ಞಾಹೀನತೆ ನಿಫಾ ಜ್ವರದ ಲಕ್ಷಣಗಳಾಗಿವೆ. ಜ್ವರದ ಲಕ್ಷಣಗಳು ಕಂಡುಬಂದಲ್ಲಿ ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಬೇಕು. ನೆರವಿಗೆ ಉಚಿತ ಸಹಾಯವಾಣಿ 104ಕ್ಕೆ ಕರೆ ಮಾಡಿ’ ಎಂದು ಆರೋಗ್ಯ ಇಲಾಖೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ನೆರೆಯ ರಾಜ್ಯ ಕೇರಳದಲ್ಲಿ ನಿಫಾ ವೈರಾಣು ಕಾಣಿಸಿಕೊಂಡಿರುವುದರಿಂದ ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಕೊಡಗು ಹಾಗೂ ಚಾಮರಾಜನಗರದಲ್ಲಿಕಟ್ಟೆಚ್ಚರ ವಹಿಸಿ, ಅಲ್ಲಿಂದ ಬರುವವರಿಗೆ ತಪಾಸಣೆ ನಡೆಸುವಂತೆ ಆರೋಗ್ಯ ಇಲಾಖೆ ಸೂಚಿಸಿದೆ.</p>.<p>ಈ ಬಗ್ಗೆ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಸುತ್ತೋಲೆ ಹೊರಡಿಸಿದ್ದಾರೆ. ‘ಈ ವೈರಾಣು 2018ರಲ್ಲಿ ಕೇರಳದಲ್ಲಿ ಕಾಣಿಸಿಕೊಂಡಿತ್ತು. ದೃಢ ಪ್ರಕರಣ ಹಾಗೂ ಮರಣ ಪ್ರಕರಣವೂ ವರದಿಯಾಗಿದ್ದವು. ಈ ರೋಗವು ಶೇ 40ರಿಂದ ಶೇ 75ರವರೆಗೆ ಮರಣ ಪ್ರಮಾಣವನ್ನು ಹೊಂದಿದೆ. ಹಾಗಾಗಿ, ಈ ಪ್ರಕರಣ ಕೇರಳದಲ್ಲಿ ವರದಿಯಾಗಿರುವುದರಿಂದ ರಾಜ್ಯದಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು. ಅದರಲ್ಲೂ ಕೇರಳಕ್ಕೆ ಹೊಂದಿಕೊಂಡಿರುವ ಗಡಿ ಜಿಲ್ಲೆಗಳಲ್ಲಿ ವಿಶೇಷ ನಿಗಾ ಇಡಬೇಕು’ ಎಂದು ತಿಳಿಸಿದ್ದಾರೆ.</p>.<p>‘ಕೇರಳದಿಂದ ಇಲ್ಲಿಗೆ ಬರುವವರು ರೋಗ ಲಕ್ಷಣಗಳನ್ನು ಹೊಂದಿದ್ದಾರೆಯೇ ಎನ್ನುವುದನ್ನು ಪರಿಶೀಲಿಸಿ, ಶಂಕಿತರನ್ನು ಗುರುತಿಸಬೇಕು. ಅಂಥವರ ಮಾದರಿಗಳನ್ನು ಸಂಗ್ರಹಿಸಿ, ಪುಣೆಯ ವೈರಾಣು<br />ವಿಜ್ಞಾನ ಸಂಸ್ಥೆಗೆ (ಎನ್ಐವಿ) ಕಳುಹಿಸಬೇಕು. ಸದ್ಯ ಈ ಸೋಂಕಿಗೆ ಚಿಕಿತ್ಸೆಯಿಲ್ಲ. ಆದರೆ, ಪೂರಕ ಚಿಕಿತ್ಸೆ ನೀಡುವ ಮೂಲಕ ಮರಣ ಪ್ರಮಾಣವನ್ನು ತಗ್ಗಿಸಲು ಸಾಧ್ಯ’ ಎಂದು ಹೇಳಿದ್ದಾರೆ.</p>.<p class="Briefhead">ನಿಫಾ ಲಕ್ಷಣಗಳಿದ್ದರೆ 104ಕ್ಕೆ ಕರೆ ಮಾಡಿ</p>.<p>‘ಜ್ವರ, ಮೈಕೈ ನೋವು, ತಲೆನೋವು, ನಡುಕ, ವಾಂತಿ, ನಿದ್ರಾಲಸ್ಯ, ತೊದಲುವಿಕೆ ಹಾಗೂ ಪ್ರಜ್ಞಾಹೀನತೆ ನಿಫಾ ಜ್ವರದ ಲಕ್ಷಣಗಳಾಗಿವೆ. ಜ್ವರದ ಲಕ್ಷಣಗಳು ಕಂಡುಬಂದಲ್ಲಿ ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಬೇಕು. ನೆರವಿಗೆ ಉಚಿತ ಸಹಾಯವಾಣಿ 104ಕ್ಕೆ ಕರೆ ಮಾಡಿ’ ಎಂದು ಆರೋಗ್ಯ ಇಲಾಖೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>