<p><strong>ಬೆಂಗಳೂರು:</strong>ಎಂಟು ತಿಂಗಳಿನಿಂದ ಬಳ್ಳಾರಿ ಜಿಲ್ಲೆಯ ದೋಣಿಮಲೈ ಕಬ್ಬಿಣ ಅದಿರು ಗಣಿ ಪ್ರದೇಶದಲ್ಲಿ ಸ್ಥಗಿತಗೊಂಡಿದ್ದ ಕಾರ್ಯಾಚರಣೆಯನ್ನು ಕರ್ನಾಟಕ ಹೈಕೋರ್ಟ್ ನಿರ್ಧಾರದ ನಂತರ, ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮ (ಎನ್ಎಂಡಿಸಿ) ಪುನರಾರಂಭಸಲಿದೆ.</p>.<p>ಗುತ್ತಿಗೆ ಪರವಾನಗಿನವೀಕರಿಸಬೇಕು ಮತ್ತು ದೋಣಿಮಲೈ ಗಣಿಯಲ್ಲಿ ಗಣಿಗಾರಿಕೆ ಕೈಗೆತ್ತಿಕೊಳ್ಳಲು ಅನುಮತಿ ನೀಡಬೇಕು ಎಂದು ಎನ್ಎಂಡಿಸಿ ರಾಜ್ಯ ಸರ್ಕಾರವನ್ನು ಕೋರಿತ್ತು.ಗಣಿಗಾರಿಕೆ ಪುನರಾರಂಭಿಸುವುದರಿಂದ ರಾಜ್ಯದಲ್ಲಿನ ಉಕ್ಕು ಕಾರ್ಖಾನೆಗಳಿಗೆ ತೀರಾ ಅಗತ್ಯವಾಗಿರುವ ಕಬ್ಬಿಣದ ಅದಿರು ಪೂರೈಸಬಹುದು. ಆ ಮೂಲಕ, ಎನ್ಎಂಡಿಸಿ ಮತ್ತು ರಾಜ್ಯ ಸರ್ಕಾರಕ್ಕೆ ಉಂಟಾಗುವ ನಷ್ಟವನ್ನು ಕಡಿಮೆಗೊಳಿಸಬಹುದು ಎಂದು ಹೇಳಿತ್ತು.</p>.<p>‘ದೀರ್ಘಕಾಲದಿಂದ ಕಾಯುತ್ತಿದ್ದ ಕ್ಷಣ ಬಂದಿದೆ. ಗಣಿಗಾರಿಕೆ ಪುನರಾರಂಭ ರಾಜ್ಯದ ಉಕ್ಕು ಉತ್ಪಾದಕರಿಗೆ, ಹೂಡಿಕೆ<br />ದಾರರಿಗೆ, ಗಣಿ ಉದ್ಯಮಿಗಳಿಗೆ, ಗ್ರಾಹಕರಿಗೆ ಮತ್ತು ನೌಕರರಿಗೆ ಸಂತಸ ತಂದಿದೆ’ ಎಂದು ಎನ್ಎಂಡಿಸಿಯ ಮುಖ್ಯ ವ್ಯವಸ್ಥಾಪಕ ನಿರ್ದೇಶಕ ಎನ್. ಬೈಜೇಂದ್ರಕುಮಾರ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>ಎಂಟು ತಿಂಗಳಿನಿಂದ ಬಳ್ಳಾರಿ ಜಿಲ್ಲೆಯ ದೋಣಿಮಲೈ ಕಬ್ಬಿಣ ಅದಿರು ಗಣಿ ಪ್ರದೇಶದಲ್ಲಿ ಸ್ಥಗಿತಗೊಂಡಿದ್ದ ಕಾರ್ಯಾಚರಣೆಯನ್ನು ಕರ್ನಾಟಕ ಹೈಕೋರ್ಟ್ ನಿರ್ಧಾರದ ನಂತರ, ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮ (ಎನ್ಎಂಡಿಸಿ) ಪುನರಾರಂಭಸಲಿದೆ.</p>.<p>ಗುತ್ತಿಗೆ ಪರವಾನಗಿನವೀಕರಿಸಬೇಕು ಮತ್ತು ದೋಣಿಮಲೈ ಗಣಿಯಲ್ಲಿ ಗಣಿಗಾರಿಕೆ ಕೈಗೆತ್ತಿಕೊಳ್ಳಲು ಅನುಮತಿ ನೀಡಬೇಕು ಎಂದು ಎನ್ಎಂಡಿಸಿ ರಾಜ್ಯ ಸರ್ಕಾರವನ್ನು ಕೋರಿತ್ತು.ಗಣಿಗಾರಿಕೆ ಪುನರಾರಂಭಿಸುವುದರಿಂದ ರಾಜ್ಯದಲ್ಲಿನ ಉಕ್ಕು ಕಾರ್ಖಾನೆಗಳಿಗೆ ತೀರಾ ಅಗತ್ಯವಾಗಿರುವ ಕಬ್ಬಿಣದ ಅದಿರು ಪೂರೈಸಬಹುದು. ಆ ಮೂಲಕ, ಎನ್ಎಂಡಿಸಿ ಮತ್ತು ರಾಜ್ಯ ಸರ್ಕಾರಕ್ಕೆ ಉಂಟಾಗುವ ನಷ್ಟವನ್ನು ಕಡಿಮೆಗೊಳಿಸಬಹುದು ಎಂದು ಹೇಳಿತ್ತು.</p>.<p>‘ದೀರ್ಘಕಾಲದಿಂದ ಕಾಯುತ್ತಿದ್ದ ಕ್ಷಣ ಬಂದಿದೆ. ಗಣಿಗಾರಿಕೆ ಪುನರಾರಂಭ ರಾಜ್ಯದ ಉಕ್ಕು ಉತ್ಪಾದಕರಿಗೆ, ಹೂಡಿಕೆ<br />ದಾರರಿಗೆ, ಗಣಿ ಉದ್ಯಮಿಗಳಿಗೆ, ಗ್ರಾಹಕರಿಗೆ ಮತ್ತು ನೌಕರರಿಗೆ ಸಂತಸ ತಂದಿದೆ’ ಎಂದು ಎನ್ಎಂಡಿಸಿಯ ಮುಖ್ಯ ವ್ಯವಸ್ಥಾಪಕ ನಿರ್ದೇಶಕ ಎನ್. ಬೈಜೇಂದ್ರಕುಮಾರ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>