ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಶನಿವಾರ ನಡೆದ ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಬರ ಪರಿಹಾರದ ಮೊತ್ತವನ್ನು ಸಾಲದ ಬಾಕಿಗೆ ಹೊಂದಾಣಿಕೆ ಮಾಡಿಕೊಳ್ಳದಂತೆ ಬ್ಯಾಂಕ್ಗಳಿಗೆ ರಾಜ್ಯ ಸರ್ಕಾರ ಹಿಂದೆಯೇ ನಿರ್ದೇಶನ ನೀಡಿದೆ. ಯಾವುದಾದರೂ ಬ್ಯಾಂಕ್ಗಳು ಆ ರೀತಿಯ ತಪ್ಪು ಮಾಡಿದ್ದರೆ, ಸರಿಪಡಿಸಬೇಕಾಗುತ್ತದೆ’ ಎಂದರು.