<p><strong>ಬಾಗಲಕೋಟೆ:</strong> ಸರ್ಕಾರಿ ಆಸ್ಪತ್ರೆ ವೈದ್ಯರು ತಮ್ಮ ಕೆಲಸದ ಅವಧಿ ಹೊರತಾಗಿ ಬೇರೆ ಸಮಯದಲ್ಲಿ ಖಾಸಗಿಯಾಗಿ ಚಿಕಿತ್ಸೆ ನೀಡಲು ಯಾವುದೇ ನಿರ್ಬಂಧ ಇಲ್ಲ ಎಂದು ಆರೋಗ್ಯ ಸಚಿವ ಶಿವಾನಂದ ಪಾಟೀಲ ಹೇಳಿದರು.</p>.<p>ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹೊಸದಾಗಿ 357 ಮಂದಿ ವೈದ್ಯರ ನೇಮಕಕ್ಕೆ ಅರ್ಜಿ ಕರೆಯಲಾಗಿದೆ. ಸದ್ಯದಲ್ಲಿಯೇ ಅವರಿಗೆ ಕೌನ್ಸೆಲಿಂಗ್ ನಡೆಸಲಾಗುವುದು. ನಾಲ್ಕು ವಿಭಾಗಗಳ ಮಟ್ಟದಲ್ಲಿ ನೇಮಕಾತಿ ಮಾಡಿಕೊಂಡು ಆಯಾ ಪ್ರದೇಶದಲ್ಲಿಯೇ ಅವರಿಗೆ ಕೆಲಸ ಮಾಡಲು ಅವಕಾಶ ಕಲ್ಪಿಸಲಾಗುವುದು’ ಎಂದರು.</p>.<p>‘ಪಕ್ಷ ನಾನು ಬಯಸಿದ್ದ ಖಾತೆ ನೀಡಿಲ್ಲ. ಹಾಗೆಂದು ಬೇಸರವೂ ಇಲ್ಲ. ನನ್ನ ಇಲಾಖೆಯ ಕೆಲಸ ಈಗಾಗಲೇ ಟೇಕಾಫ್ ಆಗಿದೆ. ಈಗಾಗಲೇ ಮೂರು ಜಿಲ್ಲೆಗಳಿಗೆ ಭೇಟಿ ನೀಡಿ ಅಲ್ಲಿನ ಆಸ್ಪತ್ರೆಗಳ ಸ್ಥಿತಿಗತಿ ಬಗ್ಗೆ ಮಾಹಿತಿ ಪಡೆದಿದ್ದೇನೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>‘ಸರ್ಕಾರದ ಅವಧಿ ಒಂದು ವರ್ಷ’ ಎಂಬ ಸಿದ್ದರಾಮಯ್ಯ ಹೇಳಿಕೆಯ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಶಿವಾನಂದ ಪಾಟೀಲ, ‘ಒಂದು ವರ್ಷದ ನಂತರ ನೋಡೋಣ ಬಿಡಿ. ಸಮ್ಮಿಶ್ರ ಸರ್ಕಾರದಲ್ಲಿ ಭಿನ್ನಮತ ಇದ್ದರೆ ಅದನ್ನು ಸಮನ್ವಯ ಸಮಿತಿ ನೋಡಿಕೊಳ್ಳುತ್ತದೆ’ ಎಂದರು.</p>.<p>‘ಎರಡನೇ ಹಂತದ ಸಂಪುಟ ವಿಸ್ತರಣೆ ವೇಳೆ ಎಂ.ಬಿ.ಪಾಟೀಲ ಅವರಿಗೆ ಸಚಿವ ಸ್ಥಾನ ಸಿಗಬಹುದು, ಸಿಗದೇ ಇರಬಹುದು. ನನಗೆ ಸಹಕರಿಸುತ್ತೇನೆ ಎಂದು ಅವರೇ ಹೇಳಿದ್ದಾರೆ. ಹಿಂದಿನ ಸರ್ಕಾರದಲ್ಲಿ ಬಾಗಲಕೋಟೆ ಜಿಲ್ಲೆಗೆ ಎರಡು ಸಚಿವ ಸ್ಥಾನ ನೀಡಲಾಗಿತ್ತು. ಈ ಬಾರಿ ವಿಜಯಪುರ ಜಿಲ್ಲೆಗೆ ಆ ಅವಕಾಶ ಸಿಕ್ಕರೆ ಸಂತೋಷ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಬಾಗಲಕೋಟೆ ಜಿಲ್ಲೆಯ ಉಸ್ತುವಾರಿ ನೀಡಿದರೆ ನಿಭಾಯಿಸುವುದಾಗಿಯೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ಸರ್ಕಾರಿ ಆಸ್ಪತ್ರೆ ವೈದ್ಯರು ತಮ್ಮ ಕೆಲಸದ ಅವಧಿ ಹೊರತಾಗಿ ಬೇರೆ ಸಮಯದಲ್ಲಿ ಖಾಸಗಿಯಾಗಿ ಚಿಕಿತ್ಸೆ ನೀಡಲು ಯಾವುದೇ ನಿರ್ಬಂಧ ಇಲ್ಲ ಎಂದು ಆರೋಗ್ಯ ಸಚಿವ ಶಿವಾನಂದ ಪಾಟೀಲ ಹೇಳಿದರು.</p>.<p>ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹೊಸದಾಗಿ 357 ಮಂದಿ ವೈದ್ಯರ ನೇಮಕಕ್ಕೆ ಅರ್ಜಿ ಕರೆಯಲಾಗಿದೆ. ಸದ್ಯದಲ್ಲಿಯೇ ಅವರಿಗೆ ಕೌನ್ಸೆಲಿಂಗ್ ನಡೆಸಲಾಗುವುದು. ನಾಲ್ಕು ವಿಭಾಗಗಳ ಮಟ್ಟದಲ್ಲಿ ನೇಮಕಾತಿ ಮಾಡಿಕೊಂಡು ಆಯಾ ಪ್ರದೇಶದಲ್ಲಿಯೇ ಅವರಿಗೆ ಕೆಲಸ ಮಾಡಲು ಅವಕಾಶ ಕಲ್ಪಿಸಲಾಗುವುದು’ ಎಂದರು.</p>.<p>‘ಪಕ್ಷ ನಾನು ಬಯಸಿದ್ದ ಖಾತೆ ನೀಡಿಲ್ಲ. ಹಾಗೆಂದು ಬೇಸರವೂ ಇಲ್ಲ. ನನ್ನ ಇಲಾಖೆಯ ಕೆಲಸ ಈಗಾಗಲೇ ಟೇಕಾಫ್ ಆಗಿದೆ. ಈಗಾಗಲೇ ಮೂರು ಜಿಲ್ಲೆಗಳಿಗೆ ಭೇಟಿ ನೀಡಿ ಅಲ್ಲಿನ ಆಸ್ಪತ್ರೆಗಳ ಸ್ಥಿತಿಗತಿ ಬಗ್ಗೆ ಮಾಹಿತಿ ಪಡೆದಿದ್ದೇನೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>‘ಸರ್ಕಾರದ ಅವಧಿ ಒಂದು ವರ್ಷ’ ಎಂಬ ಸಿದ್ದರಾಮಯ್ಯ ಹೇಳಿಕೆಯ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಶಿವಾನಂದ ಪಾಟೀಲ, ‘ಒಂದು ವರ್ಷದ ನಂತರ ನೋಡೋಣ ಬಿಡಿ. ಸಮ್ಮಿಶ್ರ ಸರ್ಕಾರದಲ್ಲಿ ಭಿನ್ನಮತ ಇದ್ದರೆ ಅದನ್ನು ಸಮನ್ವಯ ಸಮಿತಿ ನೋಡಿಕೊಳ್ಳುತ್ತದೆ’ ಎಂದರು.</p>.<p>‘ಎರಡನೇ ಹಂತದ ಸಂಪುಟ ವಿಸ್ತರಣೆ ವೇಳೆ ಎಂ.ಬಿ.ಪಾಟೀಲ ಅವರಿಗೆ ಸಚಿವ ಸ್ಥಾನ ಸಿಗಬಹುದು, ಸಿಗದೇ ಇರಬಹುದು. ನನಗೆ ಸಹಕರಿಸುತ್ತೇನೆ ಎಂದು ಅವರೇ ಹೇಳಿದ್ದಾರೆ. ಹಿಂದಿನ ಸರ್ಕಾರದಲ್ಲಿ ಬಾಗಲಕೋಟೆ ಜಿಲ್ಲೆಗೆ ಎರಡು ಸಚಿವ ಸ್ಥಾನ ನೀಡಲಾಗಿತ್ತು. ಈ ಬಾರಿ ವಿಜಯಪುರ ಜಿಲ್ಲೆಗೆ ಆ ಅವಕಾಶ ಸಿಕ್ಕರೆ ಸಂತೋಷ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಬಾಗಲಕೋಟೆ ಜಿಲ್ಲೆಯ ಉಸ್ತುವಾರಿ ನೀಡಿದರೆ ನಿಭಾಯಿಸುವುದಾಗಿಯೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>