ಪ್ರಧಾನಿ ಆದೇಶದಂತೆ ನಾವು ಲಾಕ್ಡೌನ್ ಕಟ್ಟು ನಿಟ್ಟಾಗಿ ಪಾಲಿಸಬೇಕಿದೆ. ಹಾಗಾಗಿ ಈಗ ನಾವು ಮದ್ಯ ಮಾರಾಟಕ್ಕೆ ಅನುಮತಿ ನೀಡಬೇಕೆಂದು ಪ್ರಸ್ತಾಪಿಸುವುದಿಲ್ಲ. ಮದ್ಯದಂಗಡಿಗಳಲ್ಲಿ ಜನರ ಗುಂಪನ್ನು ನಿಯಂತ್ರಿಸುವುದು ಮತ್ತು ಸಾಮಾಜಿಕ ಅಂತರ ಕಾಪಾಡುವಂತೆ ಮಾಡುವುದು ಕಷ್ಟದ ಕೆಲಸ. ಆದ್ದರಿಂದ ಏಪ್ರಿಲ್ 20ರ ವರೆಗೆ ಮದ್ಯದಂಗಡಿ ತೆರೆಯಲು ಅನುಮತಿ ನೀಡುವುದು ಕಷ್ಟವಾಗುತ್ತದೆ ಎಂದು ಅಬಕಾರಿ ಸಚಿವ ಎಚ್. ನಾಗೇಶ್ ಹೇಳಿದ್ದಾರೆ.