ವಿಚಾರಣೆ ವೇಳೆ ಪ್ರಭಾಕರ ಭಟ್ ಪರ ವಾದ ಮಂಡಿಸಿದ ಹಿರಿಯ ವಕೀಲ ಎಂ.ಅರುಣ್ ಶ್ಯಾಮ್, ‘ಅರ್ಜಿದಾರರ ವಿರುದ್ಧ ರಾಜಕೀಯಪ್ರೇರಿತ ಎಫ್ಐಆರ್ ದಾಖಲು ಮಾಡಲಾಗಿದೆ. ಅವರು ಯಾವುದೇ ಪ್ರಚೋದನಕಾರಿ ಹೇಳಿಕೆ ನೀಡಿಲ್ಲ. ಸಾಂವಿಧಾನಿಕವಾಗಿ ತಮಗಿರುವ ಅಭಿವ್ಯಕ್ತಿ ಸ್ವಾತಂತ್ರ್ಯದಡಿ ಕೆಲವು ವಾಸ್ತವಾಂಶಗಳನ್ನು ಜನರ ಮುಂದೆ ತೆರೆದಿಟ್ಟಿದ್ದಾರೆ. ಅವರ ತೇಜೋವಧೆ ಮಾಡುವ ಏಕೈಕ ದುರುದ್ದೇಶದಿಂದ ಇಂತಹ ದೂರು ದಾಖಲಿಸಲಾಗಿದೆ. ದೂರುದಾರರು ರಾಜಕೀಯ ಪಕ್ಷದ ಪದಾಧಿಕಾರಿಯಾಗಿದ್ದು ಇಂತಹುದೇ ಅಪರಾಧಿಕ ಕಲಂಗಳಡಿ ದೂರು ದಾಖಲಿಸಬೇಕು, ಅವರ ವಿರುದ್ಧ ರೌಡಿ ಶೀಟ್ ತೆರೆಯಬೇಕು ಎಂದು ಪೊಲೀಸರಿಗೆ ಸೂಚಿಸುವ ಮೂಲಕ ಕಾನೂನಿನ ದುರುಪಯೋಗ ಮಾಡಿಕೊಂಡಿದ್ದಾರೆ. ಆದ್ದರಿಂದ, ಈ ದೂರು ಮತ್ತು ಕೋರ್ಟ್ ವಿಚಾರಣೆಯನ್ನು ರದ್ದುಗೊಳಿಸಬೇಕು’ ಎಂದು ಕೋರಿದರು.