<p><strong>ಬೆಂಗಳೂರು:</strong> ವಿಧಾನಸಭೆಯಿಂದ ಪರಿಷತ್ನ ಒಂದು ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಪಕ್ಷದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.</p>.<p>ಸುದ್ದಿಗಾರರೊಂದಿಗೆ ಮಂಗಳವಾರ ಮಾತನಾಡಿ, ‘ನಮಗೆ ಬಹುಮತ ಇಲ್ಲದ ಕಾರಣಕ್ಕೆ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಿಲ್ಲ’ ಎಂದು ಹೇಳಿದರು.</p>.<p>‘ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯುವಂತೆ ನನಗೆ ಹೈಕಮಾಂಡ್ ಹೇಳಿಲ್ಲ. ವಿಳಂಬ ಮಾಡದೆ ಅಧ್ಯಕ್ಷ ರನ್ನು ನೇಮಕ ಮಾಡಬೇಕು. ವಿಧಾನಸಭೆ ಶಾಸಕಾಂಗ ಪಕ್ಷ ಹಾಗೂ ವಿರೋಧ ಪಕ್ಷದ ನಾಯಕನ ನೇಮಕದ ಬಗ್ಗೆ ಯಾವನಾಯಕರೂ ಬಹಿರಂಗ ಹೇಳಿಕೆ ನೀಡುವಂತಾಗಬಾರದು’ ಎಂದರು.</p>.<p>ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಪಕ್ಷದ ಚಟುವಟಿ ಕೆಗಳಿಂದ ಅವರು ದೂರವಿದ್ದರು. ಆದರೆ ಬೆಂಗಳೂರು ಜಿಲ್ಲಾ ಘಟಕದ ಅಧ್ಯಕ್ಷ, ಪ್ರಮುಖ ನಾಯಕರ ಜತೆಗೆ ಸಭೆ ನಡೆಸಿ ಚರ್ಚಿಸಿದರು.</p>.<p>ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ‘ಬಿಜೆಪಿಯಲ್ಲಿ ಸಚಿವ ಸಂಪುಟ ವಿಸ್ತರಣೆ ಗೊಂದಲ ಮುಂದುವರಿದಿದ್ದು, ಅಭಿವೃದ್ಧಿ ಕೆಲಸಗಳು ಕುಂಠಿತಗೊಂಡಿವೆ. ನೆರೆ, ಬರಪೀಡಿತ ಪ್ರದೇಶಗಳ ಜನರ ಸಮಸ್ಯೆ ಕೇಳುವವರೇ ಇಲ್ಲವಾಗಿದ್ದಾರೆ’ ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ವಿಧಾನಸಭೆಯಿಂದ ಪರಿಷತ್ನ ಒಂದು ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಪಕ್ಷದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.</p>.<p>ಸುದ್ದಿಗಾರರೊಂದಿಗೆ ಮಂಗಳವಾರ ಮಾತನಾಡಿ, ‘ನಮಗೆ ಬಹುಮತ ಇಲ್ಲದ ಕಾರಣಕ್ಕೆ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಿಲ್ಲ’ ಎಂದು ಹೇಳಿದರು.</p>.<p>‘ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯುವಂತೆ ನನಗೆ ಹೈಕಮಾಂಡ್ ಹೇಳಿಲ್ಲ. ವಿಳಂಬ ಮಾಡದೆ ಅಧ್ಯಕ್ಷ ರನ್ನು ನೇಮಕ ಮಾಡಬೇಕು. ವಿಧಾನಸಭೆ ಶಾಸಕಾಂಗ ಪಕ್ಷ ಹಾಗೂ ವಿರೋಧ ಪಕ್ಷದ ನಾಯಕನ ನೇಮಕದ ಬಗ್ಗೆ ಯಾವನಾಯಕರೂ ಬಹಿರಂಗ ಹೇಳಿಕೆ ನೀಡುವಂತಾಗಬಾರದು’ ಎಂದರು.</p>.<p>ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಪಕ್ಷದ ಚಟುವಟಿ ಕೆಗಳಿಂದ ಅವರು ದೂರವಿದ್ದರು. ಆದರೆ ಬೆಂಗಳೂರು ಜಿಲ್ಲಾ ಘಟಕದ ಅಧ್ಯಕ್ಷ, ಪ್ರಮುಖ ನಾಯಕರ ಜತೆಗೆ ಸಭೆ ನಡೆಸಿ ಚರ್ಚಿಸಿದರು.</p>.<p>ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ‘ಬಿಜೆಪಿಯಲ್ಲಿ ಸಚಿವ ಸಂಪುಟ ವಿಸ್ತರಣೆ ಗೊಂದಲ ಮುಂದುವರಿದಿದ್ದು, ಅಭಿವೃದ್ಧಿ ಕೆಲಸಗಳು ಕುಂಠಿತಗೊಂಡಿವೆ. ನೆರೆ, ಬರಪೀಡಿತ ಪ್ರದೇಶಗಳ ಜನರ ಸಮಸ್ಯೆ ಕೇಳುವವರೇ ಇಲ್ಲವಾಗಿದ್ದಾರೆ’ ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>