<p><strong>ಬೆಳಗಾವಿ:</strong> ‘ನಾವು ಯಾವುದೇ ಹಣ ಪಡೆದಿಲ್ಲ. ಕುದುರೆ ವ್ಯಾಪಾರ ನಡೆದಿಲ್ಲ. ನಾವು ಕಾಂಗ್ರೆಸ್ ಕಾರ್ಯಕರ್ತರಾಗಿದ್ದು, ಇಲ್ಲಿಯೂ ಪಕ್ಷದ ಪರವಾಗಿಯೇ ಕೆಲಸ ಮಾಡುತ್ತಿದ್ದೇವೆ’ ಎಂದು ಪಿಎಲ್ಡಿ ಬ್ಯಾಂಕ್ನ ನಿರ್ದೇಶಕರಲ್ಲಿ ಒಬ್ಬರಾದ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಜೊತೆ ಗುರುತಿಸಿಕೊಂಡಿರುವ ಬಾಪುಗೌಡ ಪಾಟೀಲ ಹೇಳಿದರು.</p>.<p>ನಗರದಲ್ಲಿರುವ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರ ನಿವಾಸದಲ್ಲಿ ಶುಕ್ರವಾರ ಬೆಳಿಗ್ಗೆ, ಚುನಾವಣೆಗೂ ಮುಂಚೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ನಾನು ಮೊದಲಿನಿಂದಲೂ ಕಾಂಗ್ರೆಸ್ ಕಾರ್ಯಕರ್ತನಾಗಿದ್ದೇನೆ. ಪಕ್ಷದ ಪರವಾಗಿಯೇ ಕೆಲಸ ಮಾಡಿಕೊಂಡು ಬರುತ್ತಿದ್ದೇನೆ. ಈ ಚುನಾವಣೆಯಲ್ಲೂ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಪ್ರಯತ್ನಿಸುತ್ತಿದ್ದೇನೆ. ಹೊರತು, ಹಣ ಪಡೆದು ಲಕ್ಷ್ಮಿ ಅವರಿಗೆ ಬೆಂಬಲ ನೀಡುತ್ತಿದ್ದೇನೆ ಎನ್ನುವುದು ಸುಳ್ಳು’ ಎಂದು ತಿಳಿಸಿದರು.</p>.<p>‘ಕಳೆದ ವಿಧಾನಸಭಾ ಚುನಾವಣೆಯಲ್ಲಿ ಯಮಕನಮರಡಿ ಕ್ಷೇತ್ರದಲ್ಲಿ ನಮ್ಮ ಪಕ್ಷದ ಶಾಸಕರಾದ ಸತೀಶ ಜಾರಕಿಹೊಳಿ ಅವರ ಪರವಾಗಿ ಕೆಲಸ ಮಾಡಿದ್ದೇನೆ. ಬೇಕಿದ್ದರೆ ಅವರನ್ನೇ ಕೇಳಿ. ನಾನು ಯಾವತ್ತಿದ್ದರೂ ಪಕ್ಷದ ಪರವಾಗಿದ್ದೇನೆ’ ಎಂದರು.</p>.<p>‘ಬ್ಯಾಂಕ್ನ 14 ನಿರ್ದೇಶಕರಲ್ಲಿ 9 ಜನ ನಿರ್ದೇಶಕರು ನಾವಿಲ್ಲಿ ಇದ್ದೇವೆ. ಚುನಾವಣೆ ನಡೆಯುವುದು ನಿಶ್ಚಿತ. ನಮ್ಮ ಬಣದವರೇ ಅಧ್ಯಕ್ಷರು– ಉಪಾಧ್ಯಕ್ಷರಾಗುತ್ತಾರೆ. ನಾನು ಈ ಮೊದಲು ಕೂಡ ಅಧ್ಯಕ್ಷನಾಗಿದ್ದೇನೆ. ಹೀಗಾಗಿ ಈ ಸಲ ಅಧ್ಯಕ್ಷನಾಗಲು ಬಯಸುವುದಿಲ್ಲ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ನಾವು ಯಾವುದೇ ಹಣ ಪಡೆದಿಲ್ಲ. ಕುದುರೆ ವ್ಯಾಪಾರ ನಡೆದಿಲ್ಲ. ನಾವು ಕಾಂಗ್ರೆಸ್ ಕಾರ್ಯಕರ್ತರಾಗಿದ್ದು, ಇಲ್ಲಿಯೂ ಪಕ್ಷದ ಪರವಾಗಿಯೇ ಕೆಲಸ ಮಾಡುತ್ತಿದ್ದೇವೆ’ ಎಂದು ಪಿಎಲ್ಡಿ ಬ್ಯಾಂಕ್ನ ನಿರ್ದೇಶಕರಲ್ಲಿ ಒಬ್ಬರಾದ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಜೊತೆ ಗುರುತಿಸಿಕೊಂಡಿರುವ ಬಾಪುಗೌಡ ಪಾಟೀಲ ಹೇಳಿದರು.</p>.<p>ನಗರದಲ್ಲಿರುವ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರ ನಿವಾಸದಲ್ಲಿ ಶುಕ್ರವಾರ ಬೆಳಿಗ್ಗೆ, ಚುನಾವಣೆಗೂ ಮುಂಚೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ನಾನು ಮೊದಲಿನಿಂದಲೂ ಕಾಂಗ್ರೆಸ್ ಕಾರ್ಯಕರ್ತನಾಗಿದ್ದೇನೆ. ಪಕ್ಷದ ಪರವಾಗಿಯೇ ಕೆಲಸ ಮಾಡಿಕೊಂಡು ಬರುತ್ತಿದ್ದೇನೆ. ಈ ಚುನಾವಣೆಯಲ್ಲೂ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಪ್ರಯತ್ನಿಸುತ್ತಿದ್ದೇನೆ. ಹೊರತು, ಹಣ ಪಡೆದು ಲಕ್ಷ್ಮಿ ಅವರಿಗೆ ಬೆಂಬಲ ನೀಡುತ್ತಿದ್ದೇನೆ ಎನ್ನುವುದು ಸುಳ್ಳು’ ಎಂದು ತಿಳಿಸಿದರು.</p>.<p>‘ಕಳೆದ ವಿಧಾನಸಭಾ ಚುನಾವಣೆಯಲ್ಲಿ ಯಮಕನಮರಡಿ ಕ್ಷೇತ್ರದಲ್ಲಿ ನಮ್ಮ ಪಕ್ಷದ ಶಾಸಕರಾದ ಸತೀಶ ಜಾರಕಿಹೊಳಿ ಅವರ ಪರವಾಗಿ ಕೆಲಸ ಮಾಡಿದ್ದೇನೆ. ಬೇಕಿದ್ದರೆ ಅವರನ್ನೇ ಕೇಳಿ. ನಾನು ಯಾವತ್ತಿದ್ದರೂ ಪಕ್ಷದ ಪರವಾಗಿದ್ದೇನೆ’ ಎಂದರು.</p>.<p>‘ಬ್ಯಾಂಕ್ನ 14 ನಿರ್ದೇಶಕರಲ್ಲಿ 9 ಜನ ನಿರ್ದೇಶಕರು ನಾವಿಲ್ಲಿ ಇದ್ದೇವೆ. ಚುನಾವಣೆ ನಡೆಯುವುದು ನಿಶ್ಚಿತ. ನಮ್ಮ ಬಣದವರೇ ಅಧ್ಯಕ್ಷರು– ಉಪಾಧ್ಯಕ್ಷರಾಗುತ್ತಾರೆ. ನಾನು ಈ ಮೊದಲು ಕೂಡ ಅಧ್ಯಕ್ಷನಾಗಿದ್ದೇನೆ. ಹೀಗಾಗಿ ಈ ಸಲ ಅಧ್ಯಕ್ಷನಾಗಲು ಬಯಸುವುದಿಲ್ಲ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>