ಸಂಘದ ರಾಜ್ಯ ಘಟಕದ ಅಧ್ಯಕ್ಷ ಎ.ಅಮೃತ್ ರಾಜ್ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘2024-25ನೇ ಸಾಲಿನ ಆಯವ್ಯಯದಲ್ಲಿ ಸರ್ಕಾರಿ ನೌಕರರು, ಪಾಲಿಕೆ ನೌಕರರು ಮತ್ತು ಸ್ಥಳೀಯ ಸಂಸ್ಥೆ, ನಗರ ಸಭೆ/ಪುರಸಭೆ ನೌಕರರು 7ನೇ ವೇತನ ಜಾರಿ ಮತ್ತು ಹಳೆ ಪಿಂಚಣಿ ಯೋಜನೆ ಜಾರಿಯ ಬಗ್ಗೆ ಬಹುನಿರೀಕ್ಷೆ ಇತ್ತು. ಆದರೆ ಅದನ್ನು ಹುಸಿಯಾಗಿದೆ’ ಎಂದರು.